ಬಂಟ್ವಾಳ

ದೇವಂದಬೆಟ್ಟು ಬ್ರಹ್ಮಕಲಶೋತ್ಸವ: ಉತ್ಸವದ ಮಹತ್ವದ ಕುರಿತು ಪಂಜ ಭಾಸ್ಕರ ಭಟ್ ಉಪನ್ಯಾಸ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ದೇವಂದಬೆಟ್ಟುವಿನಲ್ಲಿ ನಡೆಯುತ್ತಿರುವ ಶ್ರೀ ಲಕ್ಷ್ಮೀವಿಷ್ಣಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಗುರುವಾರ ಬ್ರಹ್ಮಕಲಶೋತ್ಸವದ ಮಹತ್ವದ ಕುರಿತು ಹಿರಿಯ ವಿದ್ವಾಂಸ ಪಂಜ ಭಾಸ್ಕರ ಭಟ್ ಉಪನ್ಯಾಸ ನೀಡಿದರು.

ಪ್ರತಿಮೆಯನ್ನು ಮಾಧ್ಯಮವಾಗಿಸಿ ದೇವಾಲಯ ನಿರ್ಮಿಸಿ ಭಗವಂತನ ಆರಾಧಿಸುವ ಮೂಲಕ ಜೀವನದಲ್ಲಿ ಧನ್ಯತೆಯ ಭಾವವನ್ನು ಪಡೆಯಬಹುದು. ದೇವರ ಬಿಂಬವನ್ನು ಶಾಸ್ತ್ರೀಯವಾಗಿ ಸಂಯೋಜಿಸಿ ವೈಜ್ಞಾನಿಕವಾಗಿ ದೇವಸ್ಥಾನದ ವ್ಯವಸ್ಥೆ ರೂಪಿಸುವ ಮೂಲಕ ದೇವರ ಸಾನಿಧ್ಯ ಪರಿಪೂರ್ಣತೆಯನ್ನು ಹೊಂದುವ ವ್ಯವಸ್ಥೆಯನ್ನು ಬ್ರಹ್ಮಕಲಶ ಎಂದು ಕರೆಯಲಾಗುತ್ತದೆ. ದೇವರ ನಾಮ ಸ್ಮರಣೆಯಿಂದ ಜೀವನಾದರ್ಶಗಳು, ಮಾನಸಿಕ ಸಾಧನಾ ಪ್ರೇರಣೆಗಳು ಲಭಿಸುತ್ತದೆ ಎಂದು ಅವರು ನುಡಿದರು. ಬ್ರಹ್ಮಕಲಶೋತ್ಸವ ಸಮಿತಿ ಗೌರವ ಸಲಹೆಗಾರರಾದ ಪದ್ಮನಾಭ ರಾವ್ ಕನಪಾಡಿ, ಸಂಚಾಲಕ ತೇವು ತಾರಾನಾಥ ಕೊಟ್ಟಾರಿ ಫರಂಗಿಪೇಟೆ ಉಪಸ್ಥಿತರಿದ್ದರು. ಸಂತೋಷ್ ಕೋಟ್ಯಾನ್ ತುಂಬೆ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ