www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಕೂಲಿ ಕಾರ್ಮಿಕನೋರ್ವನ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ವಿಟ್ಲದ ಚಂದಳಿಕೆಯ ಕಾಂತಮೂಲೆ ಎಂಬಲ್ಲಿ ಪತ್ತೆಯಾಗಿದೆ. ದಿನೇಶ್ (45) ಮೃತ ವ್ಯಕ್ತಿ.
ಮೃತದೇಹವು ಅವರ ಮನೆಯ ರೂಮ್ ನಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದಿನೇಶ್ ಮತ್ತು ಆತನ ತಂದೆ ವಸಂತ ಗೌಡ ಇಬ್ಬರೇ ಮನೆಯಲ್ಲಿ ವಾಸವಿದ್ದು, ಆತನ ತಂದೆಯೇ ಕೊಲೆಗೈದಿರಬಹುದೆಂಬ ಸಂಶಯ ವ್ಯಕ್ತವಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.