ಶೇಡಿಗುರಿ, ಅಮ್ಟೂರು ಗ್ರಾಮದ ಕೇಶವನಗರ, ಸಜಿಪಮುನ್ನೂರಿನ ಕಟ್ಲೆಮಾರ್ ನಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಆರ್ ಐ ಡಿ ಎಫ್ 25 .ಯೋಜನೆಯಡಿ ತಲಾ 16 ಲಕ್ಷ ರೂ.ವೆಚ್ಚದಲ್ಲಿ  ನರಿಕೊಂಬು ಗ್ರಾಮದ ಶೇಡಿಗುರಿ, ಅಮ್ಟೂರು ಗ್ರಾಮದ ಕೇಶವ ನಗರ ಹಾಗೂ ಸಜೀಪಮುನ್ನೂರು ಗ್ರಾಮದ ಕಟ್ಲೆಮಾರ್ ನಲ್ಲಿ ನಿರ್ಮಾಣವಾದ  ಅಂಗನವಾಡಿ ಕೇಂದ್ರಗಳ ನೂತನ ಕಟ್ಟಡವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಶನಿವಾರ ಉದ್ಘಾಟಿಸಿದರು. ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸ್ಥಳದಾನ ಮಾಡಿದವರು, ಕೇಂದ್ರ ನಡೆಸಲು ಸ್ಥಳಾವಾಕಾಶ ನೀಡಿದವರು ಹಾಗೂ ಕೊಡುಗೆಗಳನ್ನು ನೀಡಿದವರನ್ನು ಸನ್ಮಾನಿಸಲಾಯಿತು. ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಕಂಬಳಿ ಪ್ರಸ್ತಾವನೆಗೈದರು.

ಶೇಡಿಗುರಿಯಲ್ಲಿ ನರಿಕೊಂಬು ಗ್ರಾ.ಪಂ.ಅಧ್ಯಕ್ಷೆ ವಿನಿತಾ ಪುರುಷೋತ್ತಮ, ಉಪಾಧ್ಯಕ್ಷ ಪ್ರಕಾಶ್ ಮಡಿಮುಗೇರು, ಸದಸ್ಯರಾದ ಕಿಶೋರ್ ಶೆಟ್ಟಿ ಅಂತರ, ರವಿ ಅಂಚನ್, ನಾರಾಯಣ ಪೂಜಾರಿ, ರಂಜಿತ್ ಕೆದ್ದೇಲು, ಯೋಗೀಶ್ ಶಾಂತಿಲ, ಸವಿತಾ, ಸುಜಾತಾ, ಹೇಮಲತಾ, ಅರುಣ್, ಜಿ.ಪಂ.ಮಾಜಿ ಸದಸ್ಯೆ ಕಮಲಾಕ್ಷಿ ಪೂಜಾರಿ, ತಾ.ಪಂ.ಮಾಜಿ ಉಪಾಧ್ಯಕ್ಷ ಆನಂದ ಎ.ಶಂಭೂರು, ಗ್ರಾ.ಪಂ.ಮಾಜಿ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಸುನೀತಾ, ಯುವತಿ ಮಂಡಲದ ಗೀತಾ, ಸುನೀತಾ, ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು, ಜಯರಾಮ ಪೂಜಾರಿ, ಪುರುಷೋತ್ತಮ ಸಾಲ್ಯಾನ್, ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಅಮೃತ್‌ಕುಮಾರ್, ಪಿಡಿಒ ಶಿವು ಬಿರಾದಾರ್, ಶಂಭೂರು ಪ್ರೌಢಶಾಲಾ ಮುಖ್ಯಶಿಕ್ಷಕ ಕಮಲಾಕ್ಷ ಉಪಸ್ಥಿತರಿದ್ದರು. ಕೇಶವನಗರದಲ್ಲಿ ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ, ಉಪಾಧ್ಯಕ್ಷೆ ಲಕ್ಷ್ಮೀ ಪ್ರಭು, ಸದಸ್ಯರಾದ ಎಲಿಯಾಸ್ ಡಿಸೋಜ, ಜಯಂತ ಗೌಡ, ಸುಶ್ಮಾ, ಪಿಡಿಒ ವಿಜಯಶಂಕರ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ಸಾಯಿದಾ, ತಾ.ಪಂ.ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಉಪಸ್ಥಿತರಿದ್ದರು. ಕಟ್ಲೆಮಾರ್‌ನಲ್ಲಿ ಸಜೀಪಮ್ನೂರು ಗ್ರಾ.ಪಂ.ಉಪಾಧ್ಯಕ್ಷೆ ಸಬೀನಾ, ಸದಸ್ಯರಾದ ಸಿದ್ದೀಕ್, ಜಮಾಲುದ್ದೀನ್, ಪ್ರವೀಣ್ ಗಟ್ಟಿ, ಪ್ರಮುಖರಾದ ಇದಿನಬ್ಬ ನಂದಾವರ, ಉಪಾಧ್ಯಕ್ಷ ಪಿಡಿಒ ಮೊಹಮ್ಮದ್, ಪಿಡಿಒ ಮೊಹಮ್ಮದ್, ಆರೋಗ್ಯ ಇಲಾಖೆಯ ಸುಮನಾ ಕ್ರಾಸ್ತಾ ಉಪಸ್ಥಿತರಿದ್ದರು. ಸಹಾಯಕ ಸಿಡಿಪಿಒ ಶೀಲಾವತಿ, ಸಂರಕ್ಷಣಾಽಕಾರಿ ಭಾರತಿ ಬಿ.ಕುಂದರ್, ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕತೆಯರು ಸಹಕರಿಸಿದರು. 

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಶೇಡಿಗುರಿ, ಅಮ್ಟೂರು ಗ್ರಾಮದ ಕೇಶವನಗರ, ಸಜಿಪಮುನ್ನೂರಿನ ಕಟ್ಲೆಮಾರ್ ನಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*