ಬಂಟ್ವಾಳ

ರಾಯಿ – ಕಾಂಗ್ರೆಸ್ ನಿಂದ ರೈ ನೇತೃತ್ವದಲ್ಲಿ ನಮ್ಮ ನಡೆ, ಬೂತ್ ಕಡೆ ಅಭಿಯಾನ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಯಿ ಗ್ರಾಮ ಪಂಚಾಯತ್‌ಗೊಳಪಟ್ಟ ಬೂತ್ ಅಧ್ಯಕ್ಷರ ಮನೆ ಮನೆ ಭೇಟಿ ನಮ್ಮ ನಡೆ ಬೂತ್ ಕಡೆ ಕಾರ್ಯಕ್ರಮವು ನಡೆಯಿತು. ಮಾಜಿ ಸಚಿವ ಬಿ ರಮಾನಾಥ ರೈಯರ ನೇತೃತ್ವದಲ್ಲಿ ಬೂತ್ ಅಧ್ಯಕ್ಷರ ನಿವಾಸದಲ್ಲಿ ತೆಂಗಿನ ಸಸಿಯನ್ನು ನೆಡುವ ಮುಖಾಂತರ ಕಾಂಗ್ರೆಸ್ ಪಕ್ಷ ಕಲ್ಪವೃಕ್ಷ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನನ್ನ ರಾಜಕೀಯ ಜೀವನದಲ್ಲಿ ಪಕ್ಷದ ತತ್ವ ಸಿದ್ಧಾಂತ ಮತ್ತು ವೈಯಕ್ತಿಕ ವರ್ಚಸ್ಸಿನಿಂದ ಪಕ್ಷಕ್ಕೆ ಹಾಗೂ ಕಾರ್ಯಕರ್ತರ ಗೌರವಕ್ಕೆ ಚ್ಯುತಿ ಬಾರದ ರೀತಿಯಲ್ಲಿ ರಾಜಕೀಯ ಮಾಡಿರುವುದು ನನಗೆ ಸಂತೋಷ ತಂದಿದೆ ಎಂದು ಹೇಳಿದರು.

ಜಾಹೀರಾತು

ಕಾರ್ಯಕರ್ತರು ಬೂತ್ ಮಟ್ಟದಿಂದಲೇ ತಮ್ಮ ನಾಯಕತ್ವವನ್ನು ವೃದ್ಧಿಸುವ ಅವಕಾಶವನ್ನು ಸದೃಢಗೊಳಿಸುವಂತೆ ಕರೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಮಾತನಾಡಿ ಕಾರ್ಯಕರ್ತರು ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಸಕ್ರಿಯಗೊಳ್ಳುವಂತೆ ವಿನಂತಿಸಿದರು.

ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಶಿಸ್ತಿನಿಂದ ಪಕ್ಷವನ್ನು ಸಂಘಟಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಜಗದೀಶ್ ಕೊಯಿಲ, ಹಿಂದುಳಿದ ವರ್ಗದ ಅಧ್ಯಕ್ಷರಾದ ತಿಮ್ಮಪ್ಪ ಪೂಜಾರಿ ಕುಕ್ಕಿಪಾಡಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಪೂಜಾರಿ ಜೋರಾ, ವಲಯ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ರಾಯಿ, ಬೂತ್ ಸಮಿತಿ ಅಧ್ಯಕ್ಷರುಗಳಾದ ಸತೀಶ್ ಪೂಜಾರಿ ಕೊಯಿಲ, ಪ್ರಶಾಂತ್ ಹೊರಂಗಳ,ಕುಕ್ಕಿಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೀತಾರಾಮ ಶಾಂತಿ, ಮುಖಂಡರಾದ ದೇವಪ್ಪ ಕರ್ಪೆ, ರಾಮಸುಂದರ್ ಗೌಡ, ರಾಘವೇಂದ್ರ ರಾಯಿ, ಚಂದ್ರಶೇಖರ ಆಚಾರ್ಯ, ನೋಣಯ್ಯ ಸಪಲ್ಯ, ಜಯಲಕ್ಷ್ಮಿ ಎಸ್ ನಾಯ್ಕ್, ಶಿವರಾಜ್ ಶೆಟ್ಟಿ, ರುಕ್ಕಯ್ಯ ಬಂಗೇರಾ, ಜಗದೀಶ್ ಶೆಟ್ಟಿ, ಪೃಥ್ವಿರಾಜ್ ಶೆಟ್ಟಿ, ಕಿರಣ್ ಕೊಯಿಲ, ಮುರಳಿ, ಬೋಜರಾಜ್ ಕೊಡಂಗೆ, ಸಚಿದಾನಂದ ಕೊಯಿಲ, ಭಾರತಿ ಸಪಲ್ಯ, ಧನಂಜಯ ಶೆಟ್ಟಿ, ಶೇಖರ ಪಾಂಡವರಗುಡ್ಡೆ, ನಿತೇಶ್ ಕೊಯಿಲ, ಮಾಧವ ಶೆಟ್ಟಿ ಪಾಂಡವರಗುಡ್ಡೆ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

20 hours ago