ಬಂಟ್ವಾಳ

ರಾಯಿ – ಕಾಂಗ್ರೆಸ್ ನಿಂದ ರೈ ನೇತೃತ್ವದಲ್ಲಿ ನಮ್ಮ ನಡೆ, ಬೂತ್ ಕಡೆ ಅಭಿಯಾನ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಯಿ ಗ್ರಾಮ ಪಂಚಾಯತ್‌ಗೊಳಪಟ್ಟ ಬೂತ್ ಅಧ್ಯಕ್ಷರ ಮನೆ ಮನೆ ಭೇಟಿ ನಮ್ಮ ನಡೆ ಬೂತ್ ಕಡೆ ಕಾರ್ಯಕ್ರಮವು ನಡೆಯಿತು. ಮಾಜಿ ಸಚಿವ ಬಿ ರಮಾನಾಥ ರೈಯರ ನೇತೃತ್ವದಲ್ಲಿ ಬೂತ್ ಅಧ್ಯಕ್ಷರ ನಿವಾಸದಲ್ಲಿ ತೆಂಗಿನ ಸಸಿಯನ್ನು ನೆಡುವ ಮುಖಾಂತರ ಕಾಂಗ್ರೆಸ್ ಪಕ್ಷ ಕಲ್ಪವೃಕ್ಷ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನನ್ನ ರಾಜಕೀಯ ಜೀವನದಲ್ಲಿ ಪಕ್ಷದ ತತ್ವ ಸಿದ್ಧಾಂತ ಮತ್ತು ವೈಯಕ್ತಿಕ ವರ್ಚಸ್ಸಿನಿಂದ ಪಕ್ಷಕ್ಕೆ ಹಾಗೂ ಕಾರ್ಯಕರ್ತರ ಗೌರವಕ್ಕೆ ಚ್ಯುತಿ ಬಾರದ ರೀತಿಯಲ್ಲಿ ರಾಜಕೀಯ ಮಾಡಿರುವುದು ನನಗೆ ಸಂತೋಷ ತಂದಿದೆ ಎಂದು ಹೇಳಿದರು.

ಕಾರ್ಯಕರ್ತರು ಬೂತ್ ಮಟ್ಟದಿಂದಲೇ ತಮ್ಮ ನಾಯಕತ್ವವನ್ನು ವೃದ್ಧಿಸುವ ಅವಕಾಶವನ್ನು ಸದೃಢಗೊಳಿಸುವಂತೆ ಕರೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಮಾತನಾಡಿ ಕಾರ್ಯಕರ್ತರು ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಸಕ್ರಿಯಗೊಳ್ಳುವಂತೆ ವಿನಂತಿಸಿದರು.

ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಶಿಸ್ತಿನಿಂದ ಪಕ್ಷವನ್ನು ಸಂಘಟಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಜಗದೀಶ್ ಕೊಯಿಲ, ಹಿಂದುಳಿದ ವರ್ಗದ ಅಧ್ಯಕ್ಷರಾದ ತಿಮ್ಮಪ್ಪ ಪೂಜಾರಿ ಕುಕ್ಕಿಪಾಡಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಪೂಜಾರಿ ಜೋರಾ, ವಲಯ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ರಾಯಿ, ಬೂತ್ ಸಮಿತಿ ಅಧ್ಯಕ್ಷರುಗಳಾದ ಸತೀಶ್ ಪೂಜಾರಿ ಕೊಯಿಲ, ಪ್ರಶಾಂತ್ ಹೊರಂಗಳ,ಕುಕ್ಕಿಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೀತಾರಾಮ ಶಾಂತಿ, ಮುಖಂಡರಾದ ದೇವಪ್ಪ ಕರ್ಪೆ, ರಾಮಸುಂದರ್ ಗೌಡ, ರಾಘವೇಂದ್ರ ರಾಯಿ, ಚಂದ್ರಶೇಖರ ಆಚಾರ್ಯ, ನೋಣಯ್ಯ ಸಪಲ್ಯ, ಜಯಲಕ್ಷ್ಮಿ ಎಸ್ ನಾಯ್ಕ್, ಶಿವರಾಜ್ ಶೆಟ್ಟಿ, ರುಕ್ಕಯ್ಯ ಬಂಗೇರಾ, ಜಗದೀಶ್ ಶೆಟ್ಟಿ, ಪೃಥ್ವಿರಾಜ್ ಶೆಟ್ಟಿ, ಕಿರಣ್ ಕೊಯಿಲ, ಮುರಳಿ, ಬೋಜರಾಜ್ ಕೊಡಂಗೆ, ಸಚಿದಾನಂದ ಕೊಯಿಲ, ಭಾರತಿ ಸಪಲ್ಯ, ಧನಂಜಯ ಶೆಟ್ಟಿ, ಶೇಖರ ಪಾಂಡವರಗುಡ್ಡೆ, ನಿತೇಶ್ ಕೊಯಿಲ, ಮಾಧವ ಶೆಟ್ಟಿ ಪಾಂಡವರಗುಡ್ಡೆ ಉಪಸ್ಥಿತರಿದ್ದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ