ಬಂಟ್ವಾಳ

ಪೊಲೀಸ್ ಅಧಿಕಾರಿಗಳೊಂದಿಗ ಮಾತುಕತೆ, ಪ್ರಚೋದನೆಗೆ ಒಳಗಾಗಬೇಡಿ: ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್

ಮಿತ್ತಬೈಲ್ ಮಸೀದಿಗೆ ಚೂರಿ ಹೊಂದಿದ್ದ ವ್ಯಕ್ತಿ ಪ್ರವೇಶ ಘಟನೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಮಿತ್ತಬೈಲ್ ಮಸೀದಿಗೆ ನುಗ್ಗಿದ ವ್ಯಕ್ತಿಯ ಪೂರ್ವಾಪರಗಳ ಕುರಿತು ಸೂಕ್ತ ತನಿಖೆ ನಡೆಸುವಂತೆ ಈಗಾಗಲೇ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾಗಿ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ತಿಳಿಸಿದ್ದು,, ಪ್ರಚೋದನೆಗೆ ಒಳಗಾಗದಂತೆ ಮನವಿ ಮಾಡಿದ್ದಾರೆ.

ಜಾಹೀರಾತು

ಪೊಲೀಸರು ಆರೋಪಿಯ ಹಿನ್ನಲೆಯನ್ನು ಸಮಗ್ರ ತನಿಖೆ ನಡೆಸಿ ಸಮಾಜದಲ್ಲಿ ಉಂಟಾಗಿರುವ ಆತಂಕ ದೂರ ಮಾಡುವಂತೆ ಬಂಟ್ವಾಳ ಪುರಸಭಾಧ್ಯಕ್ಷ, ಮಿತ್ತಬೈಲು ಜಮಾಅತ್ ಸದಸ್ಯ ಹಾಗೂ ಮಸೀದಿ ಪರಿಸರದ ವಾರ್ಡ್ ಕೌನ್ಸಿಲರ್ ಕೂಡಾ ಆಗಿರುವ ಮುಹಮ್ಮದ್ ಶರೀಫ್ ಆಗ್ರಹಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯ ನೇತೃತ್ವ ವಹಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಎಸ್ಪಿಗೂ ಲಿಖಿತವಾಗಿ ಕೋರಲಾಗಿದೆ ಎಂದರು. ಸಾರ್ವಜನಿಕರು ಯಾವುದೇ ರಾಜಕೀಯ ಪ್ರೇರಿತ ಪ್ರಚೋದನೆಗಳಿಗೆ ಒಳಗಾಗದೆ ಪೊಲೀಸರ ತನಿಖೆಗೆ ಪೂರ್ಣ ಸಹಕಾರ ನೀಡುವುದರ ಜೊತೆಗೆ ಸಮಾಜದ ಶಾಂತಿ-ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಪುರಸಭಾಧ್ಯಕ್ಷ ಶರೀಫ್ ಅವರು ವಿನಂತಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ