ಬಂಟ್ವಾಳ

ಬಂಟ್ವಾಳದಲ್ಲಿ ಎಡನೀರು ಬ್ರಹ್ಮೈಕ್ಯ ಕೇಶವಾನಂದ ಶ್ರೀಗಳ ಸಂಸ್ಮರಣೆ, ಸಾಮಾಜಿಕ ನೇತಾರ ಎ.ಸಿ.ಭಂಡಾರಿ ಅಭಿನಂದನೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಎ.ಸಿ.ಭಂಡಾರಿ ಮಾತನಾಡಿದರು.

ಬಂಟ್ವಾಳ: ಶ್ರೀಮದೆಡನೀರು ಮಠದ ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತಿ ಮಹಾಸ್ವಾಮಿಗಳವರ ಸಂಸ್ಮರಣೆ ಹಿರಿಯ ಸಾಮಾಜಿಕ ನೇತಾರ ಎ.ಸಿ.ಭಂಡಾರಿ ಅವರಿಗೆ ಅಭಿನಂದನೆ ಕಾರ್ಯಕ್ರಮ ಬಿ.ಸಿ.ರೋಡ್ ನ ಸ್ಪರ್ಶ ಕಲಾ ಮಂದಿರದಲ್ಲಿ ಭಾನುವಾರ ನಡೆಯಿತು.

ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ದೀಪೋಜ್ವಲನಗೈದರು. ಕೇಶವಾನಂದ ಭಾರತಿ ಸ್ವಾಮೀಜಿಯವರು ಸರಳ ಮತ್ತು ಸಹಜ ವ್ಯಕ್ತಿತ್ವದವರಾಗಿ ಗುರುತಿಸಿಕೊಂಡಿದ್ದರು, ಅವರ ಸಂಸ್ಮರಣೆ ಜೊತೆಗೆ ಅದೇ ರೀತಿಯ ವ್ಯಕ್ತಿತ್ವದ ಎ.ಸಿ.ಭಂಡಾರಿ ಅವರ ಅಭಿನಂದನೆಯೂ ನಡೆಯುತ್ತಿರುವುದು ಔಚಿತ್ಯಪೂರ್ಣ ಎಂದರು.ಒಡಿಯೂರು ಶ್ರೀ  ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಕೇಶವಾನಂದ ಶ್ರೀಗಳು ಪ್ರಾತಸ್ಮರಣೀಯರು, ಎ.ಸಿ.ಭಂಡಾರಿ ಅವರು ಸಜ್ಜನಿಕೆ, ಪ್ರಾಮಾಣಿಕ ವ್ಯಕ್ತಿ, ತುಳು ಸೇವೆ ಮಾಡಿದವರು ಎಂದರು. ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಮಾತನಾಡಿ, ಶ್ರೀಗಳು ಯಕ್ಷಗಾನ ಸಪ್ತಾಹಗಳನ್ನು ಆಯೋಜಿಸಿದವರು. ಕಷ್ಟಗಳನ್ನು ಕಂಡರೂ ಭಕ್ತರಿಗೆ ಮಿಡಿದವರು ಎಂದರು.

ಜಾಹೀರಾತು

ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಯು.ಟಿ.ಖಾದರ್, ಮಾಜಿ ಸಚಿವ ಬಿ.ರಮಾನಾಥ ರೈ, ಲೋಕಸೇವಾ ಆಯೋಗ ಮಾಜಿ ಅಧ್ಯಕ್ಷ ಟಿ. ಶಾಮ ಭಟ್, ವಿಧಾನಪರಿಷತ್ತು ಸದಸ್ಯರಾದ ಮಂಜುನಾಥ ಭಂಡಾರಿ, ಕೆ.ಹರೀಶ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಸತೀಶ್ ಶೆಟ್ಟಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಪ್ರೊ. ರಾಜಮಣಿ ರಾಮಕುಂಜ ಸಂಪಾಕತ್ವದ ಆಧ್ಯಾತ್ಮಶ್ರೀ ಮತ್ತು ಶಿಖರ ಎಂಬ ಸ್ಮರಣ ಸಂಚಿಕೆಗಳನ್ನು ಬಿಡುಗಡೆ ಮಾಡಲಾಯಿತು. ಇದೇ ವೇಳೆ ಎ.ಸಿ.ಭಂಡಾರಿ, ರಾಜೀವಿ ದಂಪತಿಯನ್ನು ಗೌರವಿಸಲಾಯಿತು.  ಹಿರಿಯ ವಿದ್ವಾಂಸ  ಡಾ. ಎಂ.ಪ್ರಭಾಕರ ಜೋಷಿ ಸಂಸ್ಮರಣಾ ಭಾಷಣ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ, ಸಂಚಯಗಿರಿ ಅಧ್ಯಕ್ಷ ಪ್ರೊ.ತುಕಾರಾಮ ಪೂಜಾರಿ ಅಭಿನಂದನಾ ಭಾಷಣ ಮಾಡಿದರು.  ಈ ಸಂದರ್ಭ ಸಂಚಲನಾ ಸಮಿತಿ ಕಾರ್ಯಾಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ ರಂಗೋಲಿ ಉಪಸ್ಥಿತರಿದ್ದರು.ಸಂಚಾಲನಾ ಸಮಿತಿ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಪ್ರಾಸ್ತಾವಿಕ ಮಾತನಾಡಿದರು. ಸಂಚಾಲನಾ ಸಮಿತಿ ಸಂಚಾಲಕ ಜಗನ್ನಾಥ ಚೌಟ ಬದಿಗುಡ್ಡೆ  ಸ್ವಾಗತಿಸಿದರು. ಕಾರ್ಯದರ್ಶಿ ರಾಜಾ ಬಂಟ್ವಾಳ ವಂದಿಸಿದರು. ನ್ಯಾಯವಾದಿ ರವೀಂದ್ರ ಕುಕ್ಕಾಜೆ ಸನ್ಮಾನಿತ ಪರಿಚಯ ಮಾಡಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಬಿ.ವಿ.ಕಾರಂತ ಹುಟ್ಟಿದ ತಾಲೂಕಲ್ಲಿ ಸುಸಜ್ಜಿತ ರಂಗಮಂದಿರವೇ ಇಲ್ಲ

| ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ಪರದಾಟ | ತಾಲೂಕು ಕೇಂದ್ರದಲ್ಲಿ ಜಾಗವೇ ದೊರಕಿಲ್ಲ (more…)

11 hours ago