ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಮಾ.12ರ ಸಂಜೆ ನೃತ್ಯಧಾರ

ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರದ ಕಾರ್ಯಕ್ರಮ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಪುತ್ತೂರು ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದೊಂದಿಗೆ‌ ನೃತ್ಯಧಾರ ಮತ್ತು ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭ ಮಾ.12 ರಂದು‌ ಸಂಜೆ 4 ಗಂಟೆಗೆ  ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರದ ಸಂಚಾಲಕ ಉದಯ ವೆಂಕಟೇಶ್ ಭಟ್ ತಿಳಿಸಿದ್ದಾರೆ.

ಜಾಹೀರಾತು

ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಯಕ್ಷಗಾನ ರಂಗದ ಖ್ಯಾತ ಹಾಸ್ಯಗಾರ ದಿವಂಗತ ನಯನಕುಮಾರ್ ಅವರ ಸ್ಮರಣಾರ್ಥ ಕಲಾ ನಯನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ  ಹಿರಿಯ ನೃತ್ಯಗುರು ವಿದ್ವಾನ್ ಉಳ್ಳಾಲ ಮೋಹನ್ ಕುಮಾರ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.

ಪುತ್ತೂರು ಭಾವನ ಕಲಾ ಆಟ್ಸ್ ೯ನ ವಿಘ್ನೇಶ್ ವಿಶ್ವಕರ್ಮ ದಂಪತಿಯನ್ನು ಸನ್ಮಾನಿಸಲಾಗುವುದು ಎಂದು ವಿವರಿಸಿದ ಅವರು ಸಮಾರಂಭದ ದೀಪ ಪ್ರಜ್ವಲನೆಯಾದ ಬಳಿಕ ಕಲಾಕೇಂದ್ರದ ವಿದ್ಯಾರ್ಥಿಗಳಿಂದ  ವಿಶೇಷ ಬೆಳಕಿನ  ವಿನ್ಯಾಸದಲ್ಲಿ ನೃತ್ಯಧಾರ ನಡೆಯವುದು. ವಿದುಷಿ ರೋಹಿಣಿ ಉದಯ್ ಅವರಿಂದ ನವಗ್ರಹ ಎಂಬ ವಿನೂತನ ಪರಿಕಲ್ಪನೆಯ ನೃತ್ಯರೂಪಕ ನಡೆಯಲಿದೆ. ಪುತ್ತೂರು ನಗರಸಭೆಯ ಅಧ್ಯಕ್ಷ ಜೀವಂಧರ ಜೈನ್ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರಗಲಿದೆ. ಸಚಿವರಾದ ವಿ. ಸುನಿಲ್ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್್ ಉಳಿಪ್ಪಾಡಿಗುತ್ತು, ಕನ್ನಡ ಸಾಹಿತ್ಯ ಪರಿಷತ್
ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಮಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರಾಜೇಶ್, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ  ದೇವದಾಸ್ ಶೆಟ್ಟಿ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು. ಕೇಂದ್ರದ ಖಜಾಂಚಿ  ಜಯಲಕ್ಷ್ಮೀ,ಸದಸ್ಯೆ ರೂಪಕಲಾ ಮೊದಲಾದವರು ಸುದ್ದಿಗೋಷ್ಠಿಯಲ್ಲಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಮಾ.12ರ ಸಂಜೆ ನೃತ್ಯಧಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*