ಬೈಕ್ ನಲ್ಲಿ ಬಂದು ಪಾದಚಾರಿ ಮಹಿಳೆಯ ಚಿನ್ನದ ಸರ ಸೆಳೆದು ಪರಾರಿ: ಕೈಕುಂಜೆ ಪೂರ್ವ ಬಡಾವಣೆಯಲ್ಲಿ ಹಾಡಹಗಲೇ ನಡೆದ ಘಟನೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆ ಪೂರ್ವ ಬಡಾವಣೆಯಲ್ಲಿ ಭಾನುವಾರ ಬೆಳಗ್ಗೆ 10.15ರ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಆಗಂತುಕರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಸೆಳೆದು ಪರಾರಿಯಾಗಿದ್ದಾರೆ.

ಈ ಕುರಿತು ಕೈಕುಂಜೆ ಪೂರ್ವ ಬಡಾವಣೆ ನಿವಾಸಿ ಮಹಿಳೆ ಸುಲೋಚನಾ ಎಂಬವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಇಬ್ಬರು ಅಪರಿಚಿತರು ಈ ಕೃತ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.

ಜಾಹೀರಾತು

ಮನೆಯಿಂದ ಹೊರಟು ಕೈಕುಂಜೆಯಲ್ಲಿರುವ ಮತ್ತೊಂದು ಮನೆಗೆ ಹೋಗಿ ಹೊಲಿಯಲು ಕೊಟ್ಟ ಬಟ್ಟೆಯನ್ನು ಪಡೆದುಕೊಂಡು ವಾಪಸ್ ಬರುತ್ತಿರುವ ಸಮಯ  ಬೆಳಿಗ್ಗೆ 10.15 ರಿಂದ 10.25 ಗಂಟೆಯ ಮಧ್ಯೆ ಬಡಾವಣೆಯ ರಸ್ತೆಯಲ್ಲಿ ಎದುರಿಗೆ ಬೈಕೊಂದು ಬಂದಿದ್ದು, ಅದರಲ್ಲಿ ಇಬ್ಬರು ಅಪರಿಚಿತರು ಇದ್ದು, ಹಿಂಬದಿ ಸವಾರ ತನ್ನ ಕುತ್ತಿಗೆಯಲ್ಲಿದ್ದ ಅಂದಾಜು 1 ಲಕ್ಷ ರೂ ಮೌಲ್ಯದ 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಬಲತ್ಕಾರವಾಗಿ ಎಳೆದುಕೊಂಡು ಹೋಗಿರುವುದಾಗಿ ತಿಳಿಸಿದ್ದಾರೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಸರ್ಕಲ್ ಇನ್ಸ್ ಪೆಕ್ಟರ್ ವಿವೇಕಾನಂದ ಮತ್ತವರ ತಂಡ ಕಾರ್ಯಾಚರಣೆ ನಡೆಸಲು ಆರಂಭಿಸಿತು. ಆರೋಪಿಗಳನ್ನು ಶೀಘ್ರ ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದು, ಹಾಡಹಗಲೇ ಇಂಥ ಕೃತ್ಯ ನಡೆದಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಎಡೆಮಾಡಿದೆ.2018ರಲ್ಲಿ ಇದೇ ಮಾದರಿಯ ಘಟನೆ ಕೈಕುಂಜೆಯಲ್ಲಿ ಸಂಜೆಯ ವೇಳೆ ನಡೆದಿದ್ದು, ಅಂದು ಬಿಎಸ್ಸೆನ್ನೆಲ್ ಉದ್ಯೋಗಿಯೊಬ್ಬರು ನಡೆದುಕೊಂಡು ಮನೆಗೆ ಮರಳುತ್ತಿದ್ದ ವೇಳೆ ಬೈಕ್ ನಲ್ಲಿ ಬಂದವರು ಚಿನ್ನದ ಸರ ಸೆಳೆದೊಯ್ದಿದ್ದರು. ಬಳಿಕ ಅವರನ್ನು ಆಗಿನ ಎಸ್ಸೈ ನಂದಕುಮಾರ್ ಮತ್ತವರ ತಂಡ ಬಂಧಿಸಿ, ಸರವನ್ನು ವಶಪಡಿಸಿ ವಾರೀಸುದಾರರಿಗೆ ಮರಳಿಸಿತ್ತು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬೈಕ್ ನಲ್ಲಿ ಬಂದು ಪಾದಚಾರಿ ಮಹಿಳೆಯ ಚಿನ್ನದ ಸರ ಸೆಳೆದು ಪರಾರಿ: ಕೈಕುಂಜೆ ಪೂರ್ವ ಬಡಾವಣೆಯಲ್ಲಿ ಹಾಡಹಗಲೇ ನಡೆದ ಘಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*