ಬಂಟ್ವಾಳ

ಸಂಜೆ ಮಳೆ, ಬಂಟ್ವಾಳದ ಹಲವೆಡೆ ತೊಂದರೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳನ್ಯೂಸ್ ವರದಿ

ಗುರುವಾರ ಸಂಜೆ ಬಂಟ್ವಾಳ ಪರಿಸರದಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಇದರಿಂದ ತಂಪಾದ ವಾತಾವರಣ ಮೂಡಿದರೂ ಹಲವೆಡೆ ಜನರು ಪರದಾಡಬೇಕಾಯಿತು. ಬಿ.ಸಿ.ರೋಡ್ ಪುಂಜಾಲಕಟ್ಟೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯ ಜಕ್ರಿಬೆಟ್ಟು ಮನ್ನಾಪು ಎಂಬಲ್ಲಿ ರಸ್ತೆಯ ಪಕ್ಕದಲ್ಲೇ ಇರುವ ಮನೆಯ ಅಂಗಳದಲ್ಲಿ ನೀರು ತುಂಬಿ ಒಣಗಿಸಲು ಇಟ್ಟ ಅಡಕೆ ಹಾಳಾದವು. ರಸ್ತೆ ಪಕ್ಕದಲ್ಲಿ ಸರಿಯಾಗಿ ನೀರು ಹರಿಯುವ ವ್ಯವಸ್ಥೆಗಳಿಲ್ಲದ ಪರಿಣಾಮ ಮನೆಯವರು ತೊಂದರೆ ಅನುಭವಿಸಬೇಕಾಯಿತು. ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟರ್ಸ್ ನಿವಾಸಿ ಹರೀಶ ಶೆಟ್ಟಿ ಎಂಬವರ ಕಾಂಕ್ರೀಟು ಮನೆ ಮೇಲೆ ತೆಂಗಿನ  ಮರ ಉರುಳಿ ಬಿದ್ದು ಗೋಡೆಗೆ ಹಾನಿಯಾಗಿದೆ. ಲೊರೆಟ್ಟೋ ಅಗ್ರಾರ್ ಜಕ್ರಿಬೆಟ್ಟು ರಸ್ತೆ ಬದಿ ಸೂಕ್ತ ಚರಂಡಿ ಇಲ್ಲದ ಪರಿಣಾಮ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿರುವುದು ಕಂಡುಬಂತು. ಬಿ.ಸಿ.ರೋಡ್, ಮೇಲ್ಕಾರ್, ಕಲ್ಲಡ್ಕ ಸಹಿತ ಹಲವೆಡೆ ಕಾಮಗಾರಿ ನಡೆಯುತ್ತಿರುವ ರಸ್ತೆ ಪಕ್ಕದಲ್ಲಿ ಸರಿಯಾಗಿ ನೀರು ಹರಿಯಲು ವ್ಯವಸ್ಥೆಗಳಿಲ್ಲದೆ ಜನರು ಅಪಾಯಕಾರಿ ಸನ್ನಿವೇಶವನ್ನು ಎದುರಿಸಬೇಕಾಯಿತು. ಭಂಡಾರಿಬೆಟ್ಟು ಎಂಬಲ್ಲೂ ಮನೆಗೆ ಮಳೆಯಿಂದ ಹಾನಿಯಾದ ವರದಿಗಳು ಲಭಿಸಿವೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.