ಬಂಟ್ವಾಳ

ಸಂಜೆ ಮಳೆ, ಬಂಟ್ವಾಳದ ಹಲವೆಡೆ ತೊಂದರೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳನ್ಯೂಸ್ ವರದಿ

ಗುರುವಾರ ಸಂಜೆ ಬಂಟ್ವಾಳ ಪರಿಸರದಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಇದರಿಂದ ತಂಪಾದ ವಾತಾವರಣ ಮೂಡಿದರೂ ಹಲವೆಡೆ ಜನರು ಪರದಾಡಬೇಕಾಯಿತು. ಬಿ.ಸಿ.ರೋಡ್ ಪುಂಜಾಲಕಟ್ಟೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯ ಜಕ್ರಿಬೆಟ್ಟು ಮನ್ನಾಪು ಎಂಬಲ್ಲಿ ರಸ್ತೆಯ ಪಕ್ಕದಲ್ಲೇ ಇರುವ ಮನೆಯ ಅಂಗಳದಲ್ಲಿ ನೀರು ತುಂಬಿ ಒಣಗಿಸಲು ಇಟ್ಟ ಅಡಕೆ ಹಾಳಾದವು. ರಸ್ತೆ ಪಕ್ಕದಲ್ಲಿ ಸರಿಯಾಗಿ ನೀರು ಹರಿಯುವ ವ್ಯವಸ್ಥೆಗಳಿಲ್ಲದ ಪರಿಣಾಮ ಮನೆಯವರು ತೊಂದರೆ ಅನುಭವಿಸಬೇಕಾಯಿತು. ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟರ್ಸ್ ನಿವಾಸಿ ಹರೀಶ ಶೆಟ್ಟಿ ಎಂಬವರ ಕಾಂಕ್ರೀಟು ಮನೆ ಮೇಲೆ ತೆಂಗಿನ  ಮರ ಉರುಳಿ ಬಿದ್ದು ಗೋಡೆಗೆ ಹಾನಿಯಾಗಿದೆ. ಲೊರೆಟ್ಟೋ ಅಗ್ರಾರ್ ಜಕ್ರಿಬೆಟ್ಟು ರಸ್ತೆ ಬದಿ ಸೂಕ್ತ ಚರಂಡಿ ಇಲ್ಲದ ಪರಿಣಾಮ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿರುವುದು ಕಂಡುಬಂತು. ಬಿ.ಸಿ.ರೋಡ್, ಮೇಲ್ಕಾರ್, ಕಲ್ಲಡ್ಕ ಸಹಿತ ಹಲವೆಡೆ ಕಾಮಗಾರಿ ನಡೆಯುತ್ತಿರುವ ರಸ್ತೆ ಪಕ್ಕದಲ್ಲಿ ಸರಿಯಾಗಿ ನೀರು ಹರಿಯಲು ವ್ಯವಸ್ಥೆಗಳಿಲ್ಲದೆ ಜನರು ಅಪಾಯಕಾರಿ ಸನ್ನಿವೇಶವನ್ನು ಎದುರಿಸಬೇಕಾಯಿತು. ಭಂಡಾರಿಬೆಟ್ಟು ಎಂಬಲ್ಲೂ ಮನೆಗೆ ಮಳೆಯಿಂದ ಹಾನಿಯಾದ ವರದಿಗಳು ಲಭಿಸಿವೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ