ಯಕ್ಷಗಾನ

ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ತಿಂಗಳ ಬೆಳಕು – ಏ.1ರಂದು ಯಕ್ಷಗಾನ ತಾಳಮದ್ದಳೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕದ ತಿಂಗಳ ಬೆಳಕು ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ತಾಳಮದ್ದಳೆಯನ್ನು ಏಪ್ರಿಲ್ 1ರಂದು ಶುಕ್ರವಾರ ಸಂಜೆ 4 ಗಂಟೆಗೆ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ.

ತಿಂಗಳ ಬೆಳಕು ಎರಡನೇ ಕಾರ್ಯಕ್ರಮವಾದ ಯಕ್ಷಗಾನ ಶ್ರೀಕೃಷ್ಣ ಸಂಧಾನ ಕಥಾಪ್ರಸಂಗವನ್ನು ಲಯನ್ ಸತ್ಯನಾರಾಯಣ ರಾವ್ ಅವರ ಪ್ರಾಯೋಜಕತ್ವದಲ್ಲಿ ನಡೆಸಲಾಗುವುದು ಎಂದು ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದು, ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಉದ್ಘಾಟಿಸಲಿರುವರು, ತಾಳಮದ್ದಳೆಯಲ್ಲಿ,ಮುಮ್ಮೇಳದಲ್ಲಿ ಭಾಗವತರಾಗಿ ಯುವ ಪ್ರತಿಭೆ ಸಿದ್ಧಕಟ್ಟೆ ಭರತ್ ರಾಜ್ ಶೆಟ್ಟಿ ಚೆಂಡೆ, ಮದ್ದಳೆಯಲ್ಲಿ ಮುರಳೀಧರ ನೇರಂಕಿ, ನವೀನ್ ನರಿಕೊಂಬು ಹಾಗೂ ಅರ್ಥಗಾರಿಕೆಯಲ್ಲಿ ಖ್ಯಾತ ಹವ್ಯಾಸಿ ಕಲಾವಿದರಾದ ಗೋಪಾಲ ಶೆಟ್ಟಿ ಕಳೆಂಜ, ದಿನೇಶ್ ಶೆಟ್ಟಿ ಅಳಿಕೆ ಹಾಗೂ ಸಂಕಪ್ಪ ಶೆಟ್ಟಿ ಬಿ.ಸಿ.ರೋಡು ಪಾಲ್ಗೊಳ್ಳಲಿದ್ದಾರೆ  ಎಂದು ಹೇಳಿದ್ದಾರೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರಾಗಲು ಇಚ್ಚಿಸುವವರಿಗೆ ಅದೇ ದಿನದಂದು ರುಪಾಯಿ 500,ಆಧಾರ್ ಕಾರ್ಡ್ ಪ್ರತಿ ಹಾಗೂ ಒಂದು ಭಾವಚಿತ್ರವನ್ನು ನೀಡಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ