ಜಿಲ್ಲಾ ಸುದ್ದಿ

ಪ್ರವೀಣ ಪದ್ಯಾಣ ಅವರಿಗೆ ಡಾಕ್ಟರೇಟ್ ಪದವಿ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಕನ್ನಡದಲ್ಲಿ ಮಕ್ಕಳ ಸಾಹಿತ್ಯ: ಮೌಲ್ಯಗಳ ವಿವೇಚನೆ ವಿಷಯದಲ್ಲಿ ಬಂಟ್ವಾಳ ತಾಲೂಕಿನ ಪದ್ಯಾಣದವರಾಗಿರುವ ಉಜಿರೆಯ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಉಪನ್ಯಾಸಕ ಪ್ರವೀಣ ಪದ್ಯಾಣ ಅವರು ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಹಾಗೂ ತುಳು ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ಮಾಧವ ಎಂ. ಕೆ. ಅವರ ಮಾರ್ಗದರ್ಶನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿವಿಯು ಡಾಕ್ಟರೇಟ್ ಪದವಿ ನೀಡಿದೆ.

ಇವರು ನಿವೃತ್ತ ಮುಖ್ಯೋಪಾಧ್ಯಾಯ ಬಂಟ್ವಾಳ ತಾಲೂಕಿನ ಪದ್ಯಾಣ ತಿಮ್ಮಣ್ಣ ಭಟ್ ಮತ್ತು ಈಶ್ವರಿ ದಂಪತಿಯ ದ್ವಿತೀಯ ಪುತ್ರ. ಕಾಸರಗೋಡಿನಲ್ಲಿ ಕನ್ನಡ ಪತ್ರಿಕೋದ್ಯಮ ಇವರ ಪ್ರಕಟಿತ ಕೃತಿ. ಜಾನಪದ ತಜ್ಞ ಹಂಪಿ ವಿವಿಯ ನಿವೃತ್ತ ಪ್ರಾಧ್ಯಾಪಕ ಪ್ರೊ. ಎ.ವಿ. ನಾವಡ ಅವರ ಮಾರ್ಗದರ್ಶನದಲ್ಲಿ ಪುರಂದರದಾಸರ ಪ್ರತಿಮಾ ಜಗತ್ತು ವಿಷಯದಲ್ಲಿ ಎಂ.ಫಿಲ್ ಪದವಿ ಪಡೆದಿರುವ ಇವರು ಟಿಇಟಿ, ರಾಷ್ಟ್ರೀಯ ಶಿಕ್ಷಣ ನೀತಿ ಮೊದಲಾದ ವಿಷಯಗಳಲ್ಲಿ ಹಲವಾರು ತರಬೇತಿ, ಕಾರ್ಯಾಗಾರಗಳಲ್ಲಿ ಸಂಪನ್ಮೂಲ ವ್ಯಕ್ತಿ. ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಅನೇಕ ಪ್ರಬಂಧ ಮಂಡನೆಯನ್ನೂ ಮಾಡಿರುತ್ತಾರೆ. ಮಕ್ಕಳ ಸಾಹಿತ್ಯ, ಪತ್ರಿಕೋದ್ಯಮ, ಯಕ್ಷಗಾನ, ಸಂಶೋಧನೆ ಇವರ ಆಸಕ್ತಿಯ ಕ್ಷೇತ್ರಗಳು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.