ಪುಂಜಾಲಕಟ್ಟೆ

ಶ್ರೀ ರಾಮಾಂಜನೇಯ ಭಜನಾ ಮಂದಿರ ಶ್ರೀರಾಮ ನಗರ ಪುಂಜಾಲಕಟ್ಟೆ ನವೀಕೃತ ಭಜನಾ ಮಂದಿರದಲ್ಲಿ ಶ್ರೀ ರಾಮಾಂಜನೇಯ ದೇವರ ಪುನರ್ ಪ್ರತಿಷ್ಠೆ ಧಾರ್ಮಿಕ ಸಭಾ ಕಾರ್ಯಕ್ರಮ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಪುಂಜಾಲಕಟ್ಟೆ: ಶ್ರೀ ರಾಮಾಂಜನೇಯ ಭಜನಾ ಮಂದಿರ (ರಿ.) ಶ್ರೀರಾಮ ನಗರ ಪುಂಜಾಲಕಟ್ಟೆ ನವೀಕೃತ ಭಜನಾ ಮಂದಿರದಲ್ಲಿ ಶ್ರೀ ರಾಮಾಂಜನೇಯ ದೇವರ ಪುನರ್ ಪ್ರತಿಷ್ಠೆ ಧಾರ್ಮಿಕ ಸಭಾ  ಕಾರ್ಯಕ್ರಮ ನಡೆಯಿತು. ಆದ್ಯಕ್ಷತೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ವಹಿಸಿದ್ದರು.

ಜ್ಯೋತಿಷಿ ವಿದ್ವಾನ್ ವೆಂಕಟರಮಣ ಮಚ್ಚಿನ್ನಾಯ ಕಾರಿಂಜ ಸಭಾ ಕಾರ್ಯಕ್ರಮ ವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಗೌರವ ಅಧ್ಯಕ್ಷ ಎಂ.ತುಂಗಪ್ಪ ಬಂಗೇರ, ಬಿಜೆಪಿ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಉದ್ಯಮಿ ನಿತ್ಯಾನಂದ ಪೂಜಾರಿ ಕೆಂತಲೆ,ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಉಡುಪಿ ವಿಭಾಗದ  ನಿರ್ದೇಶಕ ವಸಂತ ಸಾಲಿಯಾನ್, ರೊ.ಚಿಕ್ಕಣ್ಣಯ್ಯ, ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿ.ಅಧ್ಯಕ್ಷ ಲಕ್ಮೀನಾರಾಯಣ ಉಡುಪ, ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷ ಹರ್ಷಿಣಿ ಪುಷ್ಪಾನಂದ, ರಾಮಾಂಜನೇಯ ಮಹಿಳಾ ಜಾಗೃತಿ ಸಮಿತಿ ಅಧ್ಯಕ್ಷೆ ಲಕ್ಮೀ ಜೆ.ಬಂಗೇರ, ಮಾಜಿ ತಾ.ಪಂ‌.ಸದಸ್ಯ ರಮೇಶ್ ಪೂಜಾರಿ ಕುಡ್ಮೇರು, ಉದ್ಯಮಿ ಹೇಮಂತ್ ಕುಮಾರ್, ಜಗನ್ನಾಥ ಶೆಟ್ಟಿ,  ಇರ್ವತ್ತೂರು ಗ್ರಾ.ಪಂ.ಸದಸ್ಯರಾದ ದಯಾನಂದ ನಾಯ್ಕ್, ಉಮೇಶ್ ಪೂಜಾರಿ, ಉದ್ಯಮಿ ಮೋಹನ್ ಶೆಟ್ಟಿ, ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ. ಮತ್ತಿತರರು ಉಪಸ್ಥಿತರಿದ್ದರು. ಭಜನಾ ಮಂದಿರದ ಗೌರವ ಅಧ್ಯಕ್ಷ ಎಂ.ತುಂಗಪ್ಪ ಬಂಗೇರ ಪ್ರಸ್ತಾವಿಕವಾಗಿ ಮಾತನಾಡಿದರು. ರಾಮಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಶ್ರೀನಿವಾಸ ಪಿ.ಅತ್ತಾಜೆ ಸ್ವಾಗತಿಸಿದರು. ಪ್ರಭಾಕರ ಪಿ.ಎಂ. ಪುಂಜಾಲಕಟ್ಟೆ ಧನ್ಯವಾದ ನೀಡಿದರು. ಸಂತೋಷ್ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.