ಪುಂಜಾಲಕಟ್ಟೆ

ಶ್ರೀ ರಾಮಾಂಜನೇಯ ಭಜನಾ ಮಂದಿರ ಶ್ರೀರಾಮ ನಗರ ಪುಂಜಾಲಕಟ್ಟೆ ನವೀಕೃತ ಭಜನಾ ಮಂದಿರದಲ್ಲಿ ಶ್ರೀ ರಾಮಾಂಜನೇಯ ದೇವರ ಪುನರ್ ಪ್ರತಿಷ್ಠೆ ಧಾರ್ಮಿಕ ಸಭಾ ಕಾರ್ಯಕ್ರಮ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಪುಂಜಾಲಕಟ್ಟೆ: ಶ್ರೀ ರಾಮಾಂಜನೇಯ ಭಜನಾ ಮಂದಿರ (ರಿ.) ಶ್ರೀರಾಮ ನಗರ ಪುಂಜಾಲಕಟ್ಟೆ ನವೀಕೃತ ಭಜನಾ ಮಂದಿರದಲ್ಲಿ ಶ್ರೀ ರಾಮಾಂಜನೇಯ ದೇವರ ಪುನರ್ ಪ್ರತಿಷ್ಠೆ ಧಾರ್ಮಿಕ ಸಭಾ  ಕಾರ್ಯಕ್ರಮ ನಡೆಯಿತು. ಆದ್ಯಕ್ಷತೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ವಹಿಸಿದ್ದರು.

ಜ್ಯೋತಿಷಿ ವಿದ್ವಾನ್ ವೆಂಕಟರಮಣ ಮಚ್ಚಿನ್ನಾಯ ಕಾರಿಂಜ ಸಭಾ ಕಾರ್ಯಕ್ರಮ ವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಗೌರವ ಅಧ್ಯಕ್ಷ ಎಂ.ತುಂಗಪ್ಪ ಬಂಗೇರ, ಬಿಜೆಪಿ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಉದ್ಯಮಿ ನಿತ್ಯಾನಂದ ಪೂಜಾರಿ ಕೆಂತಲೆ,ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಉಡುಪಿ ವಿಭಾಗದ  ನಿರ್ದೇಶಕ ವಸಂತ ಸಾಲಿಯಾನ್, ರೊ.ಚಿಕ್ಕಣ್ಣಯ್ಯ, ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿ.ಅಧ್ಯಕ್ಷ ಲಕ್ಮೀನಾರಾಯಣ ಉಡುಪ, ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷ ಹರ್ಷಿಣಿ ಪುಷ್ಪಾನಂದ, ರಾಮಾಂಜನೇಯ ಮಹಿಳಾ ಜಾಗೃತಿ ಸಮಿತಿ ಅಧ್ಯಕ್ಷೆ ಲಕ್ಮೀ ಜೆ.ಬಂಗೇರ, ಮಾಜಿ ತಾ.ಪಂ‌.ಸದಸ್ಯ ರಮೇಶ್ ಪೂಜಾರಿ ಕುಡ್ಮೇರು, ಉದ್ಯಮಿ ಹೇಮಂತ್ ಕುಮಾರ್, ಜಗನ್ನಾಥ ಶೆಟ್ಟಿ,  ಇರ್ವತ್ತೂರು ಗ್ರಾ.ಪಂ.ಸದಸ್ಯರಾದ ದಯಾನಂದ ನಾಯ್ಕ್, ಉಮೇಶ್ ಪೂಜಾರಿ, ಉದ್ಯಮಿ ಮೋಹನ್ ಶೆಟ್ಟಿ, ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ. ಮತ್ತಿತರರು ಉಪಸ್ಥಿತರಿದ್ದರು. ಭಜನಾ ಮಂದಿರದ ಗೌರವ ಅಧ್ಯಕ್ಷ ಎಂ.ತುಂಗಪ್ಪ ಬಂಗೇರ ಪ್ರಸ್ತಾವಿಕವಾಗಿ ಮಾತನಾಡಿದರು. ರಾಮಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಶ್ರೀನಿವಾಸ ಪಿ.ಅತ್ತಾಜೆ ಸ್ವಾಗತಿಸಿದರು. ಪ್ರಭಾಕರ ಪಿ.ಎಂ. ಪುಂಜಾಲಕಟ್ಟೆ ಧನ್ಯವಾದ ನೀಡಿದರು. ಸಂತೋಷ್ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ