ಬಂಟ್ವಾಳ

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

FOR ADVERTISEMENTS PLEASE CONTACT: HARISH MAMBADY, 9448548127

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಗುರುವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಿಸಲಾಯಿತು.

ತಹಸೀಲ್ದಾರ್ ರಶ್ಮಿ ಎಸ್ ಆರ್ ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಅಹಿಂಸೆಯೇ ಪರಮ ಧರ್ಮ ಎಂದು ಮಹಾವೀರರು ಸಾರಿದ್ದಾರೆ. ಈ ಅಹಿಂಸೆಯ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಪ್ರಪಂಚವೇ ಶಾಂತಿ ಮತ್ತು ನೆಮ್ಮದಿಯಿಂದ ತುಂಬಿರುತ್ತದೆ ಎಂದು ಹೇಳಿದರು. ಬಂಟ್ವಾಳ ‌ಜೈನ್ ಮಿಲನ್ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಮಾತನಾಡಿ‌ ತ್ಯಾಗದಿಂದ  ಸುಖ, ಅಹಿಂಸೆಯಿಂದ ಶಾಂತಿ, ನೆಮ್ಮದಿ ಸಿಗುತ್ತದೆ ಎಂದರು. ಹಿರಿಯರಾದ ಪಟ್ಟಾಜೆ ಜಿನರಾಜ ಅರಿಗ, ವಿಜಯಕುಮಾರಿ ಇಂದ್ರ, ಮನ್ಮಥರಾಜ ಕಾಜವ, ಮದುಶ್ರೀ ಜೀತೇಶ್, ಸನ್ಮತಿ ಜಯಕೀರ್ತಿ, ಹೇಮಂತ್ ಜೈನ್,ಹರ್ಷರಾಜ್ ಬಲ್ಲಾಳ್ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕರಾದ ವಿಜಯ್ ಆರ್, ಸಂತೋಷ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು ಹಾಜರಿದ್ದರು. ಉಪತಹಸೀಲ್ದಾರ್ ದಿವಾಕರ ಮುಗುಳಿಯ ಸ್ವಾಗತಿಸಿ ಗ್ರಾಮ ಲೆಕ್ಕಾಧಿಕಾರಿ ‌ಕುಮಾರ್ ಟಿ.ಸಿ ವಂದಿಸಿದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.