ಬಂಟ್ವಾಳ

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

FOR ADVERTISEMENTS PLEASE CONTACT: HARISH MAMBADY, 9448548127

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಗುರುವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಿಸಲಾಯಿತು.

ತಹಸೀಲ್ದಾರ್ ರಶ್ಮಿ ಎಸ್ ಆರ್ ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಅಹಿಂಸೆಯೇ ಪರಮ ಧರ್ಮ ಎಂದು ಮಹಾವೀರರು ಸಾರಿದ್ದಾರೆ. ಈ ಅಹಿಂಸೆಯ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಪ್ರಪಂಚವೇ ಶಾಂತಿ ಮತ್ತು ನೆಮ್ಮದಿಯಿಂದ ತುಂಬಿರುತ್ತದೆ ಎಂದು ಹೇಳಿದರು. ಬಂಟ್ವಾಳ ‌ಜೈನ್ ಮಿಲನ್ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಮಾತನಾಡಿ‌ ತ್ಯಾಗದಿಂದ  ಸುಖ, ಅಹಿಂಸೆಯಿಂದ ಶಾಂತಿ, ನೆಮ್ಮದಿ ಸಿಗುತ್ತದೆ ಎಂದರು. ಹಿರಿಯರಾದ ಪಟ್ಟಾಜೆ ಜಿನರಾಜ ಅರಿಗ, ವಿಜಯಕುಮಾರಿ ಇಂದ್ರ, ಮನ್ಮಥರಾಜ ಕಾಜವ, ಮದುಶ್ರೀ ಜೀತೇಶ್, ಸನ್ಮತಿ ಜಯಕೀರ್ತಿ, ಹೇಮಂತ್ ಜೈನ್,ಹರ್ಷರಾಜ್ ಬಲ್ಲಾಳ್ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕರಾದ ವಿಜಯ್ ಆರ್, ಸಂತೋಷ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು ಹಾಜರಿದ್ದರು. ಉಪತಹಸೀಲ್ದಾರ್ ದಿವಾಕರ ಮುಗುಳಿಯ ಸ್ವಾಗತಿಸಿ ಗ್ರಾಮ ಲೆಕ್ಕಾಧಿಕಾರಿ ‌ಕುಮಾರ್ ಟಿ.ಸಿ ವಂದಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.