ಮಾಣಿ ಗ್ರಾಪಂ: ಹಿಂದು ರುದ್ರಭೂಮಿ ನಿರ್ಮಾಣಕ್ಕೆ ಗುದ್ದಲಿಪೂಜೆ

FOR ADVERTISEMENTS PLEASE CONTACT: HARISH MAMBADY, 9448548127

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕಪ್ಪಕೋಡಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಹಿಂದೂರುದ್ರಭೂಮಿಗೆ ಗುದ್ದಲಿಪೂಜೆ ನೆರವೇರಿತು.

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಮಾಣಿಗುತ್ತು ಸಚಿನ್ ರೈಯವರು ಗುದ್ದಲಿಪೂಜೆ ನಡೆಸಿದರು.  ಈ ಸಂದರ್ಭ ಮಾತನಾಡಿದ ರುದ್ರಭೂಮಿ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷ ಬದಿಗುಡ್ಡೆ ಜಗನ್ನಾಥ ಚೌಟ, ರುದ್ರಭೂಮಿ ದೇವರ ಪುಣ್ಯ ಸ್ಥಳಗಳಿಗೆ ಸಮಾನ. ಯಜ್ಞ ಯಾಗಾದಿಗಳ ಬೂದಿಯಷ್ಟೆ ರುದ್ರಭೂಮಿಗೂ ಪಾವಿತ್ರ್ಯತೆ ಇದೆ. ಇದನ್ನು  ಸುಸಜ್ಜಿತವಾಗಿ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಎಲ್ಲರ ಸಹಕಾರವನ್ನು ನಿರೀಕ್ಷಿಸುತ್ತೇವೆ ಎಂದು ಹೇಳಿದರು

ಜಾಹೀರಾತು

 ಪ್ರಾಸ್ತಾವಿಕವಾಗಿ ಮಾತನಾಡಿದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಅನೇಕ ವರ್ಷಗಳ ಜನರ ಬೇಡಿಕೆಯಾಗಿರುವ ನಮ್ಮ ಗ್ರಾಮದ ಸಾರ್ವಜನಿಕ ಹಿಂದೂ ರುದ್ರಭೂಮಿಯ ನಿರ್ಮಾಣ ಕಾರ್ಯಕ್ಕೆ ಕಾಲ ಕೂಡಿ ಬಂದಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದೊಡ್ಡ ಪ್ರಮಾಣದ ಸಹಕಾರ ಸಿಗಲಿದೆ. ಅದರ ಜೊತೆಗೆ ಸರ್ಕಾರದ ಮತ್ತು ಸಾರ್ವಜನಿಕರ ಸಹಕಾರದಿಂದ ಅತೀ ಶೀಘ್ರವಾಗಿ ಕೆಲಸ ಪೂರ್ತಿಗೊಳಿಸಲಾಗುವುದು ಎಂದರು. ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಅಭಿವೃದ್ಧಿ ಅಧಿಕಾರಿ ಗಿರಿಜಾ, ಸದಸ್ಯರುಗಳಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ಇಬ್ರಾಹಿಂ.ಕೆ.ಮಾಣಿ, ರಮಣಿ, ನಾರಾಯಣ ಶೆಟ್ಟಿ, ಸುಜಾತ, ಸಮಿತಿಯ ಸದಸ್ಯರಾದ ಜಗದೀಶ್ ಜೈನ್, ಪ್ರಗತಿಬಂಧು ಸ್ವಸಹಾಯ ಸಂಘದ ಒಕ್ಕೂಟದ ಮಾಜಿ ಅಧ್ಯಕ್ಷೆ ವನಿತಾ, ಸೇವಾಪ್ರತಿನಿಧಿ ಲೈಲಾಬಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹರೀಶ್ ಮಾಣಿ, ಗುತ್ತಿಗೆದಾರರಾದ ನಾಗರಾಜ ಶೆಟ್ಟಿ ಮತ್ತಿತರರು ಉಪಸ್ಥಿತರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಾಣಿ ಗ್ರಾಪಂ: ಹಿಂದು ರುದ್ರಭೂಮಿ ನಿರ್ಮಾಣಕ್ಕೆ ಗುದ್ದಲಿಪೂಜೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*