ಬಂಟ್ವಾಳ

ಕರಾವಳಿ ಕಲೋತ್ಸವಕ್ಕೆ ಜಾನಪದ ದಿಬ್ಬಣ ಮೆರವಣಿಗೆ

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಬಂಟ್ವಾಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಏ.29ರ ಶುಕ್ರವಾರದಿಂದ ಮೇ .29ರವರೆಗೆ ಒಂದು ತಿಂಗಳ ಕಾಲ ಬಿ.ಸಿ.ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ನಡೆಯಲಿರುವ ಕರಾವಳಿ ಕಲೋತ್ಸವದ ಜಾನಪದ ದಿಬ್ಬಣಕ್ಕೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಚೆಂಡೆ ನುಡಿಸುವ ಮೂಲಕ ಶುಕ್ರವಾರ ಸಂಜೆ ಚಾಲನೆ ನೀಡಿದರು.

ಈ ಸಂದರ್ಭ ಕಲೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ ಜೈನ್, ಸ್ಥಾಪಕ, ಪ್ರಧಾನ ಸಂಚಾಲಕ ಮೋಹನದಾಸ ಕೊಟ್ಟಾರಿ, ಚಿಣ್ಣರ ಅಧ್ಯಕ್ಷೆ ಜನ್ಯಪ್ರಸಾದ್, ಸ್ವಾಗತ ಸಮಿತಿ ಅಧ್ಯಕ್ಷ ಸರಪಾಡಿ ಅಶೋಕ ಶೆಟ್ಟಿ, ಉಪಾಧ್ಯಕ್ಷ ಪ್ರಕಾಶ್ ಬಿ.ಶೆಟ್ಟಿ ಶ್ರೀಶೈಲ, ಪದಾಧಿಕಾರಿಗಳಾದ ತೀರ್ಥಪ್ರಸಾದ್ ಅನಂತಾಡಿ, ಮಹಮ್ಮದ್ ನಂದಾವರ, ಶೈಲಜಾ ರಾಜೇಶ್, ದೇವಪ್ಪ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು. ಗೊಂಬೆ ಕುಣಿತ, ಚೆಂಡೆ ವಾದನ, ನೃತ್ಯ ಪ್ರಾಕಾರಗಳು, ಕೀಲುಕುಣಿತವೇ ಮೊದಲಾದ ಆಕರ್ಷಣೆಗಳು ಮೆರವಣಿಗೆಯಲ್ಲಿ ಕಂಡುಬಂದವು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.