FOR ADVERTISEMENTS PLEASE CONTACT: HARISH MAMBADY, 9448548127
ಬಂಟ್ವಾಳ: ಕಾರ್ಮಿಕರ ಕಾಯ್ದೆಗಳನ್ನು ಮಾಲಕರ ಪರ ತಿದ್ದುಪಡಿ ಮಾಡುವ ಮೂಲಕ ಬದುಕನ್ನು ದುಸ್ತರಗೊಳಿಸುವ ಕಾರ್ಯವನ್ನು ಸರ್ಕಾರ ಮಾಡಿವೆ ಎಂದು ಬಂಟ್ವಾಳದಲ್ಲಿ ನಡೆದ ವಿಶ್ವ ಕಾರ್ಮಿಕ ದಿನಾಚರಣೆಯಲ್ಲಿ ಎಐಟಿಯುಸಿ ಮುಖಂಡರು ಆರೋಪಿಸಿದರು.
ವಿಪರೀತ ಬೆಲೆ ಏರಿಕೆಯಿಂದ ಜೀವನ ದುಸ್ತರಗೊಂಡಿದೆ. ಈ ಸಂದರ್ಭ ಕಾನೂನು ಕಾಯ್ದೆಗಳಿಗೆ ತಿದ್ದುಪಡಿ ತಂದು ಕಾರ್ಮಿಕರನ್ನು ಬೀದಿಪಾಲು ಮಾಡಲು ಸರಕಾರ ಹೊರಟಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕವರ್ಗ ಎಚ್ಚೆತ್ತುಕೊಂಡು ಸರಕಾರಗಳಿಗೆ ಬುದ್ದಿ ಕಲಿಸಬೇಕಾಗಿದೆ. ಜನವಿರೋಧಿ ನೀತಿಗಳಿಂದ ದಿಕ್ಕು ತಪ್ಪಿಸಲು ಸರ್ಕಾರ ಹೊಸ ಯೋಜನೆ ರೂಪಿಸಿದೆ ಎಂದರು,ಅಧ್ಯಕ್ಷತೆಯನ್ನು ಎಐಟಿಯುಸಿ ತಾಲೂಕು ಮುಖಂಡ ಬಾಬು ಭಂಡಾರಿ ವಹಿಸಿದ್ದರು. ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಬಿ.ಶೇಖರ್, ಭಾರತೀಯ ಮಹಿಳಾ ಒಕ್ಕೂಟ ದ ರಾಜ್ಯ ಕಾರ್ಯದರ್ಶಿ ಭಾರತಿ ಪ್ರಶಾಂತ್, ಅಖಿಲ ಭಾರತ ಯುವಜನ ಫೆಡರೇಶನ್ ಪ್ರೇಮನಾಥ ಕೆ ಮಾತನಾಡಿದರು.ಎಐಟಿಯುಸಿ ಜಿಲ್ಲಾ ಸಹಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್ ಪ್ರಸ್ತಾವನೆ ಗೈದರು. ಎನ್ ಎಫ್ ಐ ಡಬ್ಲ್ಯೂ ನಾಯಕಿ ಕೇಶವತಿ ಸ್ವಾಗತಿಸಿ ಶಮಿತಾ ವಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಬಂಟ್ವಾಳದಲ್ಲಿ ಎಐಟಿಯುಸಿಯಿಂದ ವಿಶ್ವ ಕಾರ್ಮಿಕರ ದಿನಾಚರಣೆ"