ಬಂಟ್ವಾಳ

ಬಂಟ್ವಾಳದಲ್ಲಿ ಎಐಟಿಯುಸಿಯಿಂದ ವಿಶ್ವ ಕಾರ್ಮಿಕರ ದಿನಾಚರಣೆ

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಕಾರ್ಮಿಕರ ಕಾಯ್ದೆಗಳನ್ನು ಮಾಲಕರ ಪರ ತಿದ್ದುಪಡಿ ಮಾಡುವ ಮೂಲಕ ಬದುಕನ್ನು ದುಸ್ತರಗೊಳಿಸುವ ಕಾರ್ಯವನ್ನು ಸರ್ಕಾರ ಮಾಡಿವೆ ಎಂದು ಬಂಟ್ವಾಳದಲ್ಲಿ ನಡೆದ ವಿಶ್ವ ಕಾರ್ಮಿಕ ದಿನಾಚರಣೆಯಲ್ಲಿ ಎಐಟಿಯುಸಿ ಮುಖಂಡರು ಆರೋಪಿಸಿದರು.

ವಿಪರೀತ ಬೆಲೆ ಏರಿಕೆಯಿಂದ ಜೀವನ ದುಸ್ತರಗೊಂಡಿದೆ. ಈ ಸಂದರ್ಭ ಕಾನೂನು ಕಾಯ್ದೆಗಳಿಗೆ ತಿದ್ದುಪಡಿ ತಂದು ಕಾರ್ಮಿಕರನ್ನು ಬೀದಿಪಾಲು ಮಾಡಲು ಸರಕಾರ ಹೊರಟಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕವರ್ಗ ಎಚ್ಚೆತ್ತುಕೊಂಡು ಸರಕಾರಗಳಿಗೆ ಬುದ್ದಿ ಕಲಿಸಬೇಕಾಗಿದೆ. ಜನವಿರೋಧಿ ನೀತಿಗಳಿಂದ ದಿಕ್ಕು ತಪ್ಪಿಸಲು ಸರ್ಕಾರ ಹೊಸ ಯೋಜನೆ ರೂಪಿಸಿದೆ ಎಂದರು,ಅಧ್ಯಕ್ಷತೆಯನ್ನು ಎಐಟಿಯುಸಿ ತಾಲೂಕು ಮುಖಂಡ ಬಾಬು ಭಂಡಾರಿ ವಹಿಸಿದ್ದರು. ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಬಿ.ಶೇಖರ್,  ಭಾರತೀಯ ಮಹಿಳಾ ಒಕ್ಕೂಟ  ದ ರಾಜ್ಯ ಕಾರ್ಯದರ್ಶಿ ಭಾರತಿ ಪ್ರಶಾಂತ್, ಅಖಿಲ ಭಾರತ ಯುವಜನ ಫೆಡರೇಶನ್ ಪ್ರೇಮನಾಥ ಕೆ ಮಾತನಾಡಿದರು.ಎಐಟಿಯುಸಿ ಜಿಲ್ಲಾ ಸಹಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್ ಪ್ರಸ್ತಾವನೆ ಗೈದರು. ಎನ್ ಎಫ್ ಐ ಡಬ್ಲ್ಯೂ ನಾಯಕಿ ಕೇಶವತಿ ಸ್ವಾಗತಿಸಿ ಶಮಿತಾ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ