FOR ADVERTISEMENTS PLEASE CONTACT: HARISH MAMBADY, 9448548127
ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಿಂದ ಸಾಹಿತ್ಯ ಸೃಷ್ಟಿ, ಪಸರಿಸುವ ಕೆಲಸವಾಗುತ್ತಿದ್ದು, ಬೇರುಗಳನ್ನು ಗಟ್ಟಿಗೊಳಿಸುವ ಕಾರ್ಯವನ್ನು ಕಸಾಪ ಮಾಡಬೇಕು ಎಂದು ಸಂಶೋಧಕ ಚೇತನ್ ಮುಂಡಾಜೆ ಹೇಳಿದರು.
ಗುರುವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕದಿಂದ ಬಿ.ಸಿ.ರೋಡ್ ಕನ್ನಡ ಭವನದಲ್ಲಿ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಉಪನ್ಯಾಸ ನೀಡಿದರು.ಸಾಹಿತ್ಯ ಹಳ್ಳಿಗಳಿಗೆ ತಲುಪಬೇಕು ಎಂಬ ಆಶಯ ಇಂದು ಈಡೇರುವ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದರು. ಹಿರಿಯ ಕವಿ ಗಣೇಶ ಪ್ರಸಾದ ಪಾಂಡೇಲು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿ, ಇಂಥ ಕಾರ್ಯಕ್ರಮ ಮೂಲಕ ಕಸಾಪ ಬಂಟ್ವಾಳ ಘಟಕವೂ ಜನರ ಬಳಿ ತಲುಪುವ ಕೆಲಸ ಮಾಡುತ್ತಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ವಹಿಸಿ ಮಾತನಾಡಿ, ಕಸಾಪ ವಿದ್ಯಾರ್ಥಿಗಳ ಮತ್ತು ಜನಸಾಮಾನ್ಯರನ್ನು ತಲುಪುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.ಅಬುಬಕರ್ ಅಮ್ಮುಂಜೆ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರ್ವಹಿಸಿದರು. ಗೌರವ ಕಾರ್ಯದರ್ಶಿ ವಿ.ಸು.ಭಟ್ ವಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಸಾಪದಿಂದ ಸಾಹಿತ್ಯ ಪಸರಿಸುವ ಕೆಲಸ: ಚೇತನ್ ಮುಂಡಾಜೆ"
Be the first to comment on "ಕಸಾಪದಿಂದ ಸಾಹಿತ್ಯ ಪಸರಿಸುವ ಕೆಲಸ: ಚೇತನ್ ಮುಂಡಾಜೆ"