ಬಂಟ್ವಾಳ

ಬಸ್ ಸ್ಟ್ಯಾಂಡ್ ಗೆ ಡಿಕ್ಕಿ ಹೊಡೆದು ಹೋಟೆಲ್ ಗೆ ನುಗ್ಗಿದ ಟೋಯಿಂಗ್ ಲಾರಿ

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಟೋಯಿಂಗ್ ಲಾರಿಯೊಂದು ಬಸ್ ತಂಗುದಾಣ, ಅಂಗಡಿಗಳಿಗೆ ಡಿಕ್ಕಿ ಹೊಡೆದು ಬಳಿಕ ಹೋಟೆಲ್ ಗೆ ನುಗ್ಗಿದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಸಂಭವಿಸಿದೆ.

ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದು ಕೊಡಾಜೆ ಜಂಕ್ಷನ್ ನಲ್ಲಿ ನಂದಿನಿ ಹಾಲಿನ ಅಂಗಡಿ, ಬೇಕರಿ, ಬಸ್ ತಂಗುದಾಣ, ಮೊಬೈಲ್ ಅಂಗಡಿ ಮಹಡಿಗೆ, ಡಿಕ್ಕಿ ಹೊಡೆದು ಹೋಟೆಲ್ ಗೆ ನುಗ್ಗಿದೆ.

ಜಾಹೀರಾತು

ಘಟನೆಯಿಂದ ಚಾಲಕ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಆತನನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಶಿರಸಿ ಮೂಲದ ಲಾರಿ ಎಂದು ತಿಳಿದು ಬಂದಿದೆ‌. ಹಗಲು ವೇಳೆ ಇಲ್ಲಿ ಹೆಚ್ಚಿನ ಜನ ಸಂದಣಿ ಕಾಣುತ್ತಿದ್ದು, ರಾತ್ರಿ 1 ಗಂಟೆ ಅಂದಾಜಿಗೆ ಈ ಘಟನೆ ಸಂಭವಿಸಿದ್ದರಿಂದ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ. ಘಟನೆಯಿಂದ ಅಂಗಡಿಗಳಿಗೆ ಭಾರೀ ಹಾನಿ ಸಂಭವಿಸಿದೆ

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ