ಬಾಲಕಿ ಆತ್ಮಹತ್ಯೆಗೆ ದುಷ್ಪ್ರೇರಣೆ ಆರೋಪ: ಯುವಕ ಅರೆಸ್ಟ್

FOR ADVERTISEMENTS PLEASE CONTACT: HARISH MAMBADY, 9448548127

ಕನ್ಯಾನ ಕಣಿಯೂರಿನಲ್ಲಿ ಬುಧವಾರ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಗೆ ದುಷ್ಪ್ರೇರಣೆ ನೀಡಿರುವ ಕುರಿತು ಆಕೆಯ ತಂದೆ ನೀಡಿದ ದೂರಿನ ಆಧಾರದಲ್ಲಿ ಆರೋಪಿ ಸಾಹುಲ್ ಹಮೀದ್ ಯಾನೆ ಕುಟ್ಟ ಎಂಬಾತನನ್ನು ವಿಟ್ಲ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಸಂಜೀವ ಎಂಬವರು ತನ್ನ ಅಪ್ರಾಪ್ತ ವಯಸ್ಸಿನ ಮಗಳು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಘಟನೆಗೆ ಸಾಹುಲ್ ಹಮೀದ್ ಎಂಬಾತನು ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡುವುದಾಗಿ ಆರೋಪಿಸಿ ದೂರು ನೀಡಿದ್ದು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಜಾಹೀರಾತು

ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಉಪಾಧೀಕ್ಷಕ ಶಿವಾಂಶು ರಜಪೂತ್,ನೇತೃತ್ವದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಕಣಿಯೂರು ತಲೆಕ್ಕಿ ನಿವಾಸಿ ಸಾಹುಲ್‌ ಹಮೀದ್‌ ಎಂಬಾತನ ಪತ್ತೆಗೆ ಎರಡು ತಂಡಗಳನ್ನು ರಚಿಸಲಾಗಿತ್ತು. ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿಂದ ಗುರುವಾರ ರಾತ್ರಿ ಆರೋಪಿಯನ್ನುವಶಕ್ಕೆ ಪಡೆದು ದಸ್ತಗಿರಿ ಮಾಡಡಲಾಗಿದೆ. ಎಸ್‌ಪಿ ಋಷಿಕೇಶ್‌ ಭಗವಾನ ಸೋನಾವಣೆ ಮತ್ತು ಅಡಿಷನಲ್‌ ಎಸ್‌ಪಿ ಕುಮಾರ ಚಂದ್ರ ಮಾರ್ಗದರ್ಶನ, ಬಂಟ್ವಾಳ ಉಪವಿಭಾಗದ ಎಎಸ್‌ಪಿ ಶಿವಾಂಶು ರಜಪೂತ ನೇತೃತ್ವ, ವಿಟ್ಲ ಠಾಣೆ ಪೊಲೀಸ್ ನಿರೀಕ್ಷಕ ನಾಗರಾಜ್‌ ಎಚ್‌ ಈ ಸಾರಥ್ಯದಲ್ಲಿ ಪಿಎಸ್ಸೈ ಸಂದೀಪ ಕುಮಾರ್‌ ಶೆಟ್ಟಿ , ಪಿಎಸ್ಸೈ ಮಂಜುನಾಥ ಟಿ ಸಿಬ್ಬಂದಿಗಳಾದ ಡ್ಯಾನಿ ಪ್ರಾನ್ಸಿಸ್‌ ತಾವ್ರೂ ,ಪ್ರಸನ್ ,ಸೀತಾರಾಮ ಹೇಮರಾಜ,ಅಶೋಕ್‌,ಶ್ರೀಧರ ,ಕುಮಾರ ,ಹಾಗೂ ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್‌ಕುಮಾರ್‌ ,ದಿವಾಕರ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರವಹಿಸಿರುತ್ತಾರೆ ಎಂದು ಎಸ್ಪಿ ತಿಳಿಸಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಾಲಕಿ ಆತ್ಮಹತ್ಯೆಗೆ ದುಷ್ಪ್ರೇರಣೆ ಆರೋಪ: ಯುವಕ ಅರೆಸ್ಟ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*