FOR ADVERTISEMENTS PLEASE CONTACT: HARISH MAMBADY, 9448548127
ಬಂಟ್ವಾಳ: ಕನ್ಯಾನದಲ್ಲಿ ಸಾವಿಗೀಡಾದ ಬಾಲಕಿ ಮನೆಗೆ ಬಂಟ್ವಾಳ ಶಾಸಕ ,ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶುಕ್ರವಾರ ಭೇಟಿ ನೀಡಿ, ಬಾಲಕಿ ಮನೆಯವರೊಂದಿಗೆ ಮಾತುಕತೆ ನಡೆಸಿದರು. ಪ್ರಕರಣದ ತನಿಖೆಯನ್ನು ಪೋಲಿಸ್ ಇಲಾಖೆ ನಡೆಸುತ್ತಿದ್ದು ತಪ್ಪಿತಸ್ಥನಿಗೆ ಈ ನೆಲದ ಕಾನೂನಿನಡಿಯಲ್ಲೇ ಶಿಕ್ಷೆಯಾಗಲಿದೆ ಎಂದರು. ಪೋಷಕರಿಗೆ ಬಂಟ್ವಾಳ ಬಿಜೆಪಿ ಕ್ಷೇಮನಿಧಿಯಿಂದ ನೂತನ ಮನೆ ನಿರ್ಮಿಸುವುದಾಗಿ ಸ್ಥಳದಲ್ಲಿಯೇ ಶಾಸಕರು ಘೋಷಣೆ ಮಾಡಿದರು.ಈ ಸಂದರ್ಭ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಮಂಡಲದ ಪದಾಧಿಕಾರಿಗಳು,ಸಂಘ ಪರಿವಾರದ ಪ್ರಮುಖರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…