Categories: ವಿಟ್ಲ

ಕನ್ಯಾನ ಪ್ರಕರಣ: ವಿದ್ಯಾರ್ಥಿನಿ ಮನೆಗೆ ಒಡಿಯೂರು ಶ್ರೀಗಳ ಭೇಟಿ

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಕನ್ಯಾನ ಗ್ರಾಮದ ಕಣಿಯೂರಿನ ಬಾಡಿಗೆ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿದರು. ವಿದ್ಯಾರ್ಥಿನಿಯ ಫೋಷಕರಿಂದ  ಮಾಹಿತಿ ಪಡೆದುಕೊಂಡು ಅವರಿಗೆ ಧೈರ್ಯ ತುಂಬಿ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ ಸಾವು ಬೇರೆಯೇ ರೀತಿಯಲ್ಲಿ ನಡೆದಿರುವುದಾಗಿ ಕಂಡುಬರುತ್ತಿದೆ. ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಆರೋಪಿಗೆ ತಕ್ಕ ಶಿಕ್ಷೆಯಾಗುವಂತಾಗಬೇಕು. ಇನ್ನು ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸಬಾರದು. ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿದವರಿಗೂ ಶಿಕ್ಷೆಯಾಗಬೇಕು ಎಂದರು.

ಕನ್ಯಾನ ಗ್ರಾಮ ಪಂಚಾಯತ್ ಸದಸ್ಯ ರಘುರಾಮ ಶೆಟ್ಟಿ ಕನ್ಯಾನ, ಒಡಿಯೂರು ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ, ಲಿಂಗಪ್ಪ ಗೌಡ ಪಣೆಯಡ್ಕ, ವಿಶ್ವಹಿಂದೂ ಪರಿಷತ್ ನ ಕನ್ಯಾನ ಘಟಕದ ಅಧ್ಯಕ್ಷ ಲೊಕೇಶ್ ಗೌಡ ಕನ್ಯಾನ, ಭಜರಂಗದಳ ಸಂಚಾಲಕ ಕೃಷ್ಣಪ್ಪ ಗೌಡ ಪಣೆಯಡ್ಕ, ಭಜರಂಗದಳ ವಿಟ್ಲ ಪ್ರಖಂಡ ಸಂಚಾಲಕ ಚಂದ್ರಹಾಸ ಕನ್ಯಾನ, ವಿಶ್ವಹಿಂದೂ ಪರಿಷತ್ ನ ಕನ್ಯಾನ ಘಟಕದ ಕಾರ್ಯದರ್ಶಿ ಮನೋಜ್ ಕುಮಾರ್ ಬನಾರಿ, ಜಗದೀಶ್ ಸಿ.ಹೆಚ್, ದಿನೇಶ್  ಪಟ್ಲ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

2 days ago