ಬಂಟ್ವಾಳ

ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ಬೀಳ್ಕೊಡುಗೆ ಸಮಾರಂಭ

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಬಂಟ್ವಾಳ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ  ರಶ್ಮಿ ಎಸ್.ಆರ್. ಅವರು ಮಂಗಳೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ತಾಲೂಕು ಆಡಳಿತದ ಪರವಾಗಿ ಬಂಟ್ವಾಳ ಕಂದಾಯ ಇಲಾಖೆಯ ಸಿಬ್ಬಂದಿಗಳಿಂದ ಶಾಲು , ಸ್ಮರಣಿಕೆ ನೀಡಿ ಗೌರವಿಸಲಾಯಿತು‌.‌

ಬಿ.ಸಿ.ರೋಡಿನಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾ ಭವನದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ  ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತರಾದ ಮದನ್ ಮೋಹನ್ ರವರು ತಹಸೀಲ್ದಾರ್ ರಶ್ಮಿ.ಎಸ್.ಆರ್. ಬಂಟ್ವಾಳದಲ್ಲಿ ಜನಾನುರಾಗಿಯಾಗಿ ಸಮರ್ಥವಾಗಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾದಂತೆ ಮುಂದಿನ ತಮ್ಮ ಇಲಾಖೆಯಲ್ಲೂ ಜಿಲ್ಲಾಮಟ್ಟದಲ್ಲಿ  ಅವರ ಕರ್ತವ್ಯ ದಕ್ಷತೆಗೆ ಶ್ರೇಯಸ್ಸು ಲಭಿಸಲಿ ಎಂದು ಹಾರೈಸಿದರು.

ಜಾಹೀರಾತು

ರಾಜ್ಯ ಸರ್ಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಉಮಾನಾಥ ರೈ ಮೇರಾವು, ಮೂಡಬಿದರೆಯ ಉಪತಹಸೀಲ್ದಾರ್  ರಾಮ ಕಾಟಿಪಳ್ಳ, ಸಹೋದ್ಯೋಗಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ತಹಸೀಲ್ದಾರರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ  ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ದಿವಾಕರ ಮುಗುಳಿಯ ಕಂದಾಯ ನಿರೀಕ್ಷಕರಾದ ಸಂತೋಷ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು ಸ್ವಾಗತಿಸಿದರು. ವಿಟ್ಲ ಹೋಬಳಿ ಕಂದಾಯ ನಿರೀಕ್ಷಕರಾದ ಪ್ರಶಾಂತ್ ಶೆಟ್ಟಿ ಧನ್ಯವಾದ ಸಲ್ಲಿಸಿದರು. ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

11 hours ago