ಭತ್ತದ ಫಸಲಿನ ಕುರಿತ ವಾಗ್ವಾದ: ತಮ್ಮನನ್ನೇ ಹತ್ಯೆ ಮಾಡಿದ ಅಣ್ಣ

FOR ADVERTISEMENTS PLEASE CONTACT: HARISH MAMBADY, 9448548127

ಆರೋಪಿ

ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ಸಹೋದರರ ನಡುವಿನ ಗಲಾಟೆ ಬಳಿಕ ತಮ್ಮನನ್ನು ಹತ್ಯೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಐತಪ್ಪ ನಾಯ್ಕ(47) ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ರಾತ್ರಿ ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ಸಹೋದರರ ನಡುವೆ ಗಲಾಟೆ ನಡೆದು ಅಣ್ಣನೇ ತಮ್ಮನ್ನನ್ನು ಕೊಲೆಗೈದ ಘಟನೆ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾದ ಐತ್ತಪ್ಪ ನಾಯ್ಕ (47) ಎಂಬಾತನನ್ನು ಬಂಧಿಸಲಾಯಿತು ಎಂದು ತಿಳಿಸಿರುವ ಪೊಲೀಸರು, ಘಟನೆಗೆ ಕಾರಣವನ್ನು ನೀಡಿದ್ದಾರೆ. ಬಾಳಪ್ಪ ನಾಯ್ಕ ಪ್ರಸ್ತುತ ಎಣ್ಮಕಜೆ ಗ್ರಾಮದ ಅಡ್ಯನಡ್ಕದಲ್ಲಿ ವಾಸವಾಗಿದ್ದು ತರವಾಡು ಮನೆಯಲ್ಲಿ ಗೊಂದೋಳು ಪೂಜೆ ಗೆಂದು ತನ್ನ ಹಳೆಯ ಮನೆಗೆ ತಾಯಿ ಜೊತೆಗೆ ಬಂದಿದ್ದ. ಈ ವೇಳೆ ಸಹೋದರರಿಬ್ಬರೂ ತಕಾರಾರು ಇರುವ ಜಾಗದಲ್ಲಿ ಬೆಳೆದ ಭತ್ತ ಫಸಲಿನಲ್ಲಿ ಪಾಲು ಕೇಳಿದ ವಿಚಾರವಾಗಿ ಗಲಾಟೆ ನಡೆಸಿದ್ದಾರೆ. ಜಗಳ ತಾರಕ್ಕಕ್ಕೇರಿದ್ದು, ಅಣ್ಣ ತಮ್ಮನನ್ನು ಮರದ ತುಂಡಿನಿಂದ ಹೊಡೆದು ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಋಷಿಕೇಶ್ ಭಗವಾನ ಸೋನಾವಣೆ ಮತ್ತು ಅಡಿಷನಲ್ ಎಸ್‌ಪಿ ಕುಮಾರಚಂದ್ರ, ಬಂಟ್ವಾಳ ಉಪವಿಭಾಗದ ಎಎಸ್‌ಪಿ ಶಿವಾಂಶು ರಜಪೂತ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್‌ ಈ ನೇತೃತ್ವದಲ್ಲಿ ಪಿ ಎಸ್ ಐ ಮಂಜುನಾಥ ಟಿ, ಪ್ರೊಬೆಷನರಿ ಪಿ ಎಸ್ ಐ ಗಳಾದ ಧನಂಜಯ, ಬಿ.ಸಿ, ಜಯಶ್ರೀ ಪ್ರಭಾಕರ್ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸಿದೆ.

ಜಾಹೀರಾತು
ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಭತ್ತದ ಫಸಲಿನ ಕುರಿತ ವಾಗ್ವಾದ: ತಮ್ಮನನ್ನೇ ಹತ್ಯೆ ಮಾಡಿದ ಅಣ್ಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*