Categories: ವಿಟ್ಲ

ಭತ್ತದ ಫಸಲಿನ ಕುರಿತ ವಾಗ್ವಾದ: ತಮ್ಮನನ್ನೇ ಹತ್ಯೆ ಮಾಡಿದ ಅಣ್ಣ

FOR ADVERTISEMENTS PLEASE CONTACT: HARISH MAMBADY, 9448548127

ಆರೋಪಿ

ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ಸಹೋದರರ ನಡುವಿನ ಗಲಾಟೆ ಬಳಿಕ ತಮ್ಮನನ್ನು ಹತ್ಯೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಐತಪ್ಪ ನಾಯ್ಕ(47) ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ರಾತ್ರಿ ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ಸಹೋದರರ ನಡುವೆ ಗಲಾಟೆ ನಡೆದು ಅಣ್ಣನೇ ತಮ್ಮನ್ನನ್ನು ಕೊಲೆಗೈದ ಘಟನೆ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾದ ಐತ್ತಪ್ಪ ನಾಯ್ಕ (47) ಎಂಬಾತನನ್ನು ಬಂಧಿಸಲಾಯಿತು ಎಂದು ತಿಳಿಸಿರುವ ಪೊಲೀಸರು, ಘಟನೆಗೆ ಕಾರಣವನ್ನು ನೀಡಿದ್ದಾರೆ. ಬಾಳಪ್ಪ ನಾಯ್ಕ ಪ್ರಸ್ತುತ ಎಣ್ಮಕಜೆ ಗ್ರಾಮದ ಅಡ್ಯನಡ್ಕದಲ್ಲಿ ವಾಸವಾಗಿದ್ದು ತರವಾಡು ಮನೆಯಲ್ಲಿ ಗೊಂದೋಳು ಪೂಜೆ ಗೆಂದು ತನ್ನ ಹಳೆಯ ಮನೆಗೆ ತಾಯಿ ಜೊತೆಗೆ ಬಂದಿದ್ದ. ಈ ವೇಳೆ ಸಹೋದರರಿಬ್ಬರೂ ತಕಾರಾರು ಇರುವ ಜಾಗದಲ್ಲಿ ಬೆಳೆದ ಭತ್ತ ಫಸಲಿನಲ್ಲಿ ಪಾಲು ಕೇಳಿದ ವಿಚಾರವಾಗಿ ಗಲಾಟೆ ನಡೆಸಿದ್ದಾರೆ. ಜಗಳ ತಾರಕ್ಕಕ್ಕೇರಿದ್ದು, ಅಣ್ಣ ತಮ್ಮನನ್ನು ಮರದ ತುಂಡಿನಿಂದ ಹೊಡೆದು ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಋಷಿಕೇಶ್ ಭಗವಾನ ಸೋನಾವಣೆ ಮತ್ತು ಅಡಿಷನಲ್ ಎಸ್‌ಪಿ ಕುಮಾರಚಂದ್ರ, ಬಂಟ್ವಾಳ ಉಪವಿಭಾಗದ ಎಎಸ್‌ಪಿ ಶಿವಾಂಶು ರಜಪೂತ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್‌ ಈ ನೇತೃತ್ವದಲ್ಲಿ ಪಿ ಎಸ್ ಐ ಮಂಜುನಾಥ ಟಿ, ಪ್ರೊಬೆಷನರಿ ಪಿ ಎಸ್ ಐ ಗಳಾದ ಧನಂಜಯ, ಬಿ.ಸಿ, ಜಯಶ್ರೀ ಪ್ರಭಾಕರ್ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸಿದೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

5 hours ago