ಪಾಣೆಮಂಗಳೂರು ನರಿಕೊಂಬು ಮಧ್ಯೆ ಮೊಗರ್ನಾಡಿನಲ್ಲಿ ಸೋಮವಾರ ರಾತ್ರಿ ಬೃಹತ್ ಮರವೊಂದು ರಸ್ತೆಗೆ ಉರುಳಿದ್ದನ್ನು ಬಿ.ಸಿ.ರೋಡ್ ನ ಗಜಲಕ್ಷ್ಮೀ ಕ್ರೇನ್ ಮೂಲಕ ಬದಿಗೆ ಸರಿಸಿ, ಸಂಚಾರಕ್ಕೆ ಅನುವು ಮಾಡಲಾಗಿದೆ. ರಾತ್ರಿ ಸುಮಾರು 8ರ ವೇಳೆ ಹಳೆಯ ಮರವೊಂದು ಉರುಳಿ ಬಿದ್ದ ಪರಿಣಾಮ ನರಿಕೊಂಬು ಪಾಣೆಮಂಗಳೂರು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕೂಡಲೇ ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ಸಹಾಯದಿಂದ ಮರವನ್ನು ಬದಿಗೆ ಸರಿಸುವ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಸ್ತೆಗೆ ಅಡ್ಡಲಾಗಿ ಬಿದ್ದ ಮರ ತೆರವು: ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ಮೂಲಕ ಕಾರ್ಯಾಚರಣೆ, ರಸ್ತೆ ಸಂಚಾರ ಸುಗಮ"