ಪಾಣೆಮಂಗಳೂರು ನರಿಕೊಂಬು ಮಧ್ಯೆ ಮೊಗರ್ನಾಡಿನಲ್ಲಿ ಸೋಮವಾರ ರಾತ್ರಿ ಬೃಹತ್ ಮರವೊಂದು ರಸ್ತೆಗೆ ಉರುಳಿದ್ದನ್ನು ಬಿ.ಸಿ.ರೋಡ್ ನ ಗಜಲಕ್ಷ್ಮೀ ಕ್ರೇನ್ ಮೂಲಕ ಬದಿಗೆ ಸರಿಸಿ, ಸಂಚಾರಕ್ಕೆ ಅನುವು ಮಾಡಲಾಗಿದೆ. ರಾತ್ರಿ ಸುಮಾರು 8ರ ವೇಳೆ ಹಳೆಯ ಮರವೊಂದು ಉರುಳಿ ಬಿದ್ದ ಪರಿಣಾಮ ನರಿಕೊಂಬು ಪಾಣೆಮಂಗಳೂರು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕೂಡಲೇ ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ಸಹಾಯದಿಂದ ಮರವನ್ನು ಬದಿಗೆ ಸರಿಸುವ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…