ಬಂಟ್ವಾಳ: ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಯುವಕನೊಬ್ಬನ ಮೇಲೆ ಮೂವರು ಫರಂಗಿಪೇಟೆ ಸಮೀಪ ಕಡೆಗೋಳಿ ದ್ವಾರದ ಬಳಿ ಹಲ್ಲೆ ನಡೆಸಿದ್ದಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಂಬೆಯ ನಫೀಲ್(18) ಎಂಬವರು ದೂರು ನೀಡಿದ್ದು, ಅವರು ಕೂಲಿ ಕೆಲಸ ಮುಗಿಸಿಕೊಂಡು ಫರಂಗಿಪೇಟೆಯಿಂದ ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭ, ರಾತ್ರಿ ಕಡೆಗೋಳಿ ದ್ವಾರ ತಲುಪಿದಾಗ ಮೊಬೈಲ್ ಗೆ ಕರೆ ಬಂದ ಹಿನ್ನೆಲೆಯಲ್ಲಿ ಮಾತನಾಡುತ್ತಿದ್ದ ವೇಳೆ ಕಡೆಗೋಳಿ ಪರಿಸರದ ಮೂವರು ಯುವಕರು ನಮ್ಮ ಏರಿಯಾದಲ್ಲಿ ಇಷ್ಟು ಹೊತ್ತಿಗೆ ನಿನಗೇನು ಕೆಲಸ ಎಂದು ಪ್ರಶ್ನಿಸಿ, ಅವಾಚ್ಯ ಶಬ್ದಗಳಲ್ಲಿ ನಿಂದಿಸಿ, ಮರದ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾಗಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕನಿಗೆ ಹಲ್ಲೆ"