ಬಂಟ್ವಾಳ

ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಲೆಕ್ಕಪತ್ರಪರಿಶೋಧಕ  ಕೆ.ಎನ್. ರಮೇಶ್ ನಿಧನ

ಮಂಗಳೂರು ಪಡೀಲ್ ನಲ್ಲಿ ಸ್ಕೂಟರ್ ನಲ್ಲಿ ಸಾಗುತ್ತಿದ್ದ ಸಂದರ್ಭ ಕಾರು ಡಿಕ್ಕಿಯಾಗಿ ಗಾಯಗೊಂಡಿದ್ದ ಉಡುಪಿ ಜಿಪಂ ಎಂಜಿನಿಯರಿಂಗ್ ವಿಭಾಗದಲ್ಲಿ ಜಿಲ್ಲಾ ಲೆಕ್ಕಪತ್ರಪರಿಶೋಧಕರಾಗಿದ್ದು ನಿವೃತ್ತರಾಗಿದ್ದು, ಬಿ.ಸಿ.ರೋಡಿನ  ಕೆ.ಎನ್.ರಮೇಶ್ (67) ಚಿಕಿತ್ಸೆ ಫಲಕಾರಿಯಾಗದೆ ಮೇ 22ರಂದು ನಿಧನ ಹೊಂದಿದರು. ಪತ್ನಿ, ಮಗಳ ಸಹಿತ ಅಪಾರ ಬಂಧು ಬಳಗವನ್ನು ಅವರು ಹೊಂದಿದ್ದರು. ಮೇ.7ರಂದು ಸಂಜೆ ಮಂಗಳೂರು ಪಡೀಲ್ ನಲ್ಲಿ ಸ್ಕೂಟರ್ ನಲ್ಲಿ ಬಿ.ಸಿ.ರೋಡಿಗೆ ಬರುತ್ತಿದ್ದ ಸಂದರ್ಭ ಕಾರೊಂದು ಡಿಕ್ಕಿ ಹೊಡೆದಿತ್ತು. ಪರಿಣಾಮ, ತಲೆಗೆ ತೀವ್ರ ಏಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಸಮೀಪದಲ್ಲಿದ್ದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸುಮಾರು 16 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದು ಜೀವನ್ಮರಣ ಹೋರಾಟದಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೇ 22ರಂದು ಕೊನೆಯುಸಿರೆಳೆದರು. ಭಾಲ್ಕಿ, ಹಾಸನ, ಬೆಳ್ತಂಗಡಿ ಸುಳ್ಯ ಸಹಿತ ರಾಜ್ಯದ ವಿವಿಧೆಡೆ ಅವರು ಲೆಕ್ಕಾಧೀಕ್ಷಕ ಸಹಿತ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು, ಉಡುಪಿ ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗದಲ್ಲಿ ಜಿಲ್ಲಾ ಲೆಕ್ಕಪತ್ರಪರಿಶೋಧಕರಾಗಿ ನಿವೃತ್ತಹೊಂದಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.