ಬಂಟ್ವಾಳ

ಸಮಾನ ಮನಸ್ಕ ಸಂಘಟನೆಗಳಿಂದ ಬಿ.ಸಿ.ರೊಡಿನಲ್ಲಿ ಪ್ರತಿಭಟನೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಬಂಟ್ವಾಳ ತಾಲೂಕು ಸಮಿತಿ ನೇತೃತ್ವದಲ್ಲಿ ಮಂಗಳವಾರ ಬಿಸಿರೋಡು ಮೇಲು ಸೇತುವೆ ಕೆಳ ಭಾಗದಲ್ಲಿ ಪ್ರತಿಭಟನೆ ನಡೆಸಿತು.

ಸಂಘದ ಅಧ್ಯಕ್ಷರಾದ ಪ್ರಕಾಶ್ ಬಿ ಶೆಟ್ಟಿ ತುಂಬೆ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಲೆ ಏರಿಕೆ, ಪಠ್ಯಪುಸ್ತಕ ಪರಿಷ್ಕರಣೆಗಳ ಮೂಲಕ ಜನವಿರೋಧಿ ನೀತಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಸರಿಸುತ್ತಿವೆ ಎಂದು ದೂರಿದರು.

ಸಂಘದ ಗೌರವಾಧ್ಯಕ್ಷರಾದ ಬಿ ಎಂ ಪ್ರಭಾಕರ ದೈವಗುಡ್ಡೆ, ಸಹಕಾರ್‍ಯದರ್ಶಿ ಸುರೆಶ್ ಕುಮಾರ್ ಬಂಟ್ವಾಳ್, ಪ್ರಧಾನ ಕಾರ್‍ಯದರ್ಶಿ ಬಿ.ಶೇಖರ್, ಪ್ರಮುಖರಾದ ರಾಮಣ್ಣ ವಿಟ್ಲ, ಬಿ.ಎಂ.ಅಬ್ಬಾಸ್ ಆಲಿ, ಉದಯಕುಮಾರ್, ಶಿವರಾಮ ಶೆಟ್ಟಿ, ಮೋಹನ ಅರಳ, ಕೇಶವ ನಾಯ್ಕ್ ಮತ್ತಿತರರು ಪ್ರತಿಭಟನೆಯಲ್ಲಿದ್ದು ಘೋಷಣೆ ಕೂಗಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ