ಸ್ವತಃ ಸ್ವಚ್ಛತಾ ಅಭಿಯಾನದ ವಾಹನಕ್ಕೆ ಡ್ರೈವರ್ ಆದ ಪೆರುವಾಯಿ ಗ್ರಾಪಂ ಉಪಾಧ್ಯಕ್ಷೆ

ಹರೀಶ ಮಾಂಬಾಡಿ, www.bantwalnews.com

ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶವಾದ ಪೆರುವಾಯಿ ಗ್ರಾಪಂ 8 ಸದಸ್ಯರಿರುವ ಸಣ್ಣ ಪಂಚಾಯಿತಿ. ಇದರ ಉಪಾಧ್ಯಕ್ಷೆ 29ರ ಹರೆಯದ ನೆಫಿಸಾ ತಸ್ಲಿ ಅವರು ಸ್ವಚ್ಛತೆಗಾಗಿ ಕಸ ಕೊಂಡೊಯ್ಯುವ ವಾಹನವನ್ನು ಸ್ವತಃ ತಾವೇ ಡ್ರೈವ್ ಮಾಡಿಕೊಂಡು ಮನೆ, ಅಂಗಡಿಗಳಿಗೆ ತೆರಳಿ ತ್ಯಾಜ್ಯ ಸಂಗ್ರಹಿಸುವ ಕಾರ್ಯಕ್ಕೆ ಪ್ರೇರಣೆ ನೀಡುವ ಮೂಲಕ ಇತರರಿಗೂ ಮಾದರಿ ಆಗಿದ್ದಾರೆ.

ಕಳೆದ ಒಂದು ತಿಂಗಳಿಂದ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛ ವಾಹಿನಿಗೆ ಚಾಲನೆ ನೀಡಿದ್ದೇನೆ. ಪಂಚಾಯಿತಿಯಲ್ಲಿ ಸುಮಾರು 600 ಮನೆಗಳಿದ್ದು, ಪ್ರತಿ ಮನೆಯಿಂದ ವಾರಕ್ಕೆ ಎರಡು ಬಾರಿಯಾದರೂ ತ್ಯಾಜ್ಯ ಸಂಗ್ರಹವಾಗುವಂತೆ ಮಾರ್ಗಸೂಚಿ ಸಿದ್ಧಪಡಿಸಿದ್ದೇವೆ. ನಾಲ್ಕು ತಿಂಗಳ ಹಿಂದೆ ಗ್ರಾಮ ಪಂಚಾಯಿತಿಗೆ ವಾಹನ ಬಂದಿತ್ತು.  ಗ್ರಾಮದ ಮಹಿಳೆಯರು ಸಮಾಜದಲ್ಲಿ ಮುಂದೆ ಬರಬೇಕು ಎಂಬ ಉದ್ದೇಶದಿಂದ ಮಹಿಳಾ ಚಾಲಕರನ್ನು ನೇಮಿಸಲು ತೀರ್ಮಾನಿಸಲಾಗಿತ್ತು. ಅದರಂತೆ ನಿಯೋಜಿತಳಾಗಿರುವ ಚಾಲಕಿ ಇನ್ನೂ ಸಮರ್ಪಕ ತರಬೇತಿ ಪಡೆದಿರಲಿಲ್ಲ. ನಾನು ಕಾರು ಚಲಾಯಿಸಿಕೊಂಡು ಕಚೇರಿಗೆ ಬರುತ್ತೇನೆ, ಡ್ರೈವಿಂಗ್ ನನಗೆ ಗೊತ್ತಿರುವ ಕಾರಣ ನಾನೇ ಏಕೆ ಇದನ್ನು ನಿರ್ವಹಿಸಬಾರದು ಎಂದು ಯೋಚಿಸಿ ಪಿಡಿಒ ಮತ್ತು ಇತರ ಸದಸ್ಯರ ಪ್ರೋತ್ಸಾಹದಿಂದ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇನೆ ಎಂದು ನೆಫೀಸಾ ತಿಳಿಸಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸ್ವತಃ ಸ್ವಚ್ಛತಾ ಅಭಿಯಾನದ ವಾಹನಕ್ಕೆ ಡ್ರೈವರ್ ಆದ ಪೆರುವಾಯಿ ಗ್ರಾಪಂ ಉಪಾಧ್ಯಕ್ಷೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*