ಬಂಟ್ವಾಳ

ಸ್ವತಃ ಸ್ವಚ್ಛತಾ ಅಭಿಯಾನದ ವಾಹನಕ್ಕೆ ಡ್ರೈವರ್ ಆದ ಪೆರುವಾಯಿ ಗ್ರಾಪಂ ಉಪಾಧ್ಯಕ್ಷೆ

ಹರೀಶ ಮಾಂಬಾಡಿ, www.bantwalnews.com

ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶವಾದ ಪೆರುವಾಯಿ ಗ್ರಾಪಂ 8 ಸದಸ್ಯರಿರುವ ಸಣ್ಣ ಪಂಚಾಯಿತಿ. ಇದರ ಉಪಾಧ್ಯಕ್ಷೆ 29ರ ಹರೆಯದ ನೆಫಿಸಾ ತಸ್ಲಿ ಅವರು ಸ್ವಚ್ಛತೆಗಾಗಿ ಕಸ ಕೊಂಡೊಯ್ಯುವ ವಾಹನವನ್ನು ಸ್ವತಃ ತಾವೇ ಡ್ರೈವ್ ಮಾಡಿಕೊಂಡು ಮನೆ, ಅಂಗಡಿಗಳಿಗೆ ತೆರಳಿ ತ್ಯಾಜ್ಯ ಸಂಗ್ರಹಿಸುವ ಕಾರ್ಯಕ್ಕೆ ಪ್ರೇರಣೆ ನೀಡುವ ಮೂಲಕ ಇತರರಿಗೂ ಮಾದರಿ ಆಗಿದ್ದಾರೆ.

ಕಳೆದ ಒಂದು ತಿಂಗಳಿಂದ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛ ವಾಹಿನಿಗೆ ಚಾಲನೆ ನೀಡಿದ್ದೇನೆ. ಪಂಚಾಯಿತಿಯಲ್ಲಿ ಸುಮಾರು 600 ಮನೆಗಳಿದ್ದು, ಪ್ರತಿ ಮನೆಯಿಂದ ವಾರಕ್ಕೆ ಎರಡು ಬಾರಿಯಾದರೂ ತ್ಯಾಜ್ಯ ಸಂಗ್ರಹವಾಗುವಂತೆ ಮಾರ್ಗಸೂಚಿ ಸಿದ್ಧಪಡಿಸಿದ್ದೇವೆ. ನಾಲ್ಕು ತಿಂಗಳ ಹಿಂದೆ ಗ್ರಾಮ ಪಂಚಾಯಿತಿಗೆ ವಾಹನ ಬಂದಿತ್ತು.  ಗ್ರಾಮದ ಮಹಿಳೆಯರು ಸಮಾಜದಲ್ಲಿ ಮುಂದೆ ಬರಬೇಕು ಎಂಬ ಉದ್ದೇಶದಿಂದ ಮಹಿಳಾ ಚಾಲಕರನ್ನು ನೇಮಿಸಲು ತೀರ್ಮಾನಿಸಲಾಗಿತ್ತು. ಅದರಂತೆ ನಿಯೋಜಿತಳಾಗಿರುವ ಚಾಲಕಿ ಇನ್ನೂ ಸಮರ್ಪಕ ತರಬೇತಿ ಪಡೆದಿರಲಿಲ್ಲ. ನಾನು ಕಾರು ಚಲಾಯಿಸಿಕೊಂಡು ಕಚೇರಿಗೆ ಬರುತ್ತೇನೆ, ಡ್ರೈವಿಂಗ್ ನನಗೆ ಗೊತ್ತಿರುವ ಕಾರಣ ನಾನೇ ಏಕೆ ಇದನ್ನು ನಿರ್ವಹಿಸಬಾರದು ಎಂದು ಯೋಚಿಸಿ ಪಿಡಿಒ ಮತ್ತು ಇತರ ಸದಸ್ಯರ ಪ್ರೋತ್ಸಾಹದಿಂದ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇನೆ ಎಂದು ನೆಫೀಸಾ ತಿಳಿಸಿದರು.

ಜಾಹೀರಾತು

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.