ಜಿಲ್ಲಾ ಸುದ್ದಿ

ನೋಂದಣಿಯಾಗದ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಜಿ.ಪಂ. ಸಿಇಒ ಸೂಚನೆ

ಜಿಲ್ಲೆಯಲ್ಲಿ ಕೆ.ಪಿ.ಎಮ್.ಇ.ಎ ಕಾಯ್ದೆಯಡಿ ನೋಂದಣಿಯಾಗದ ಹಾಗೂ ನವೀಕರಣಗೊಳ್ಳದ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಜೂ.02ರ ಗುರುವಾರ ನಗರದ ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ನಡೆದ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ತಡೆ ಕಾಯ್ದೆ 1994 ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಎಸ್ಟಾಬ್ಲಿμï ಮೆಂಟ್  ಕಾಯ್ದೆಯ ಅನುμÁ್ಠನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೆ.ಪಿ.ಎಮ್.ಇ.ಎ ಕಾಯ್ದೆ ಮತ್ತು ಕಾನೂನು ಉಲ್ಲಂಘನೆ ಮಾಡುವ ಸೆಂಟರ್ ಗಳ ಸ್ಕ್ಯಾನಿಂಗ್ ಉಪಕರಣಗಳನ್ನು ವಶಪಡಿಸಿಕೊಂಡು ಅದನ್ನು ಮುಚ್ಚಬೇಕು, ಕೆ.ಪಿ.ಎಮ್.ಇ.ಎ ಅಡಿಯಲ್ಲಿ ನೋಂದಣಿಯಾಗದ ಮತ್ತು ನವೀಕರಣವಾಗದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ವಹಿಸಬೇಕು. ಪ್ರಯೋಗಾಲಯದ ಮಾದರಿ ಸಂಗ್ರಹ ಕೇಂದ್ರಗಳು ಕಡ್ಡಾಯವಾಗಿ ನೋಂದಣಿಯಾಗಬೇಕು, ನೋಂದಣಿಯಾಗದ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ತಾಕೀತು ಮಾಡಿದರು.

ಜಾಹೀರಾತು

ಅಗ್ನಿ ಹಾಗೂ ವಿದ್ಯುತ್ ನಿಂದ ಯಾವುದೇ ರೀತಿಯ ಅವಘಡಗಳಾಗದಂತೆ ಸುರಕ್ಷತಾ ಕ್ರಮಗಳ ಬಗ್ಗೆ ಎಚ್ಚರ ವಹಿಸಬೇಕು,   ಕಾಲಕಾಲಕ್ಕೆ ಅವುಗಳನ್ನು ಪರಿಶೀಲಿಸಬೇಕು, ನಿರ್ಲಕ್ಷಿಸುವ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಬೇಕು, ಹಳೆಯ ಖಾಸಗಿ ಆಸ್ಪತ್ರೆಗಳು ಅಗ್ನಿ ಅವಘಡಗಳಿಂದ ಸುರಕ್ಷತೆ ವಹಿಸುವ ಬಗ್ಗೆ ಮಾಹಿತಿ ನೀಡಬೇಕು ಎಂದ ಅವರು, ಲಿಂಗಾನುಪಾತದ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು, ಆಸಕ್ತ ಎನ್.ಜಿ.ಓಗಳು ಅಥವಾ ಸಂಘ-ಸಂಸ್ಥೆಗಳ ಮೂಲಕ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.

ಎಲ್ಲಾ ಗರ್ಭಿಣಿಯರಿಗೂ ತಾಯಿ ಕಾರ್ಡ್ ಕಡ್ಡಾಯವಾಗಿ ನೀಡಬೇಕು ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳು ಆನ್‍ಲೈನ್ ಮುಖಾಂತರ ಗರ್ಭಿಣಿಯರ ಮಾಹಿತಿಯನ್ನು ಕಡ್ಡಾಯವಾಗಿ ದಾಖಲಿಸಬೇಕೆಂದು ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ಡಾ. ಕಿಶೋರ್ ಕುಮಾರ್, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಹಾಗೂ  ಅಧೀಕ್ಷಕ ಡಾ.ಶಾನುಭೋಗ, ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಡಾ.ವತ್ಸಲಾ ಕಾಮತ್ ಹಾಗೂ ಜಿಲ್ಲಾ ಸಲಹಾ ಸಮಿತಿಯ ಸದಸ್ಯರು ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.