ಬಂಟ್ವಾಳ: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಹಾಗೂ ಏಕಲವ್ಯ ಪ್ರಶಸ್ತಿ ಪುರಸ್ಕೃತ ಬದಿಗುಡ್ಡೆ ದಿ. ಉದಯ ಚೌಟ ಅವರಿಗೆ ಶ್ರದ್ಧಾಂಜಲಿ ಸಭೆ ಬುಧವಾರ ಮಾಣಿಯ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಪುತ್ತೂರು ಕೋಟಿಚೆನ್ನಯ ಕಂಬಳ ಕೂಟದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಅವರೊಬ್ಬ ಉತ್ತಮ ಕ್ರೀಡಾ ಸಂಘಟಕ ಮತ್ತು ಕ್ರೀಡಾಕೂಟಗಳಲ್ಲಿ ಸಮಸ್ಯೆಗಳು ಎದುರಾದಾಗ ಚಾಕಚಕ್ಯತೆಯಿಂದ ನಿವಾರಿಸಬಲ್ಲ ಸಾಮರ್ಥ್ಯವುಳ್ಳವರಾಗಿದ್ದರು ಎಂದರು. ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಮಾಣಿಗುತ್ತು ಸಚಿನ್ ರೈಯವರು ಅಧ್ಯಕ್ಷತೆ ವಹಿಸಿದ್ದರು. ಕಲ್ಲಾಜೆಗುತ್ತು ಪ್ರಫುಲ್ಲ.ಆರ್.ರೈ, ಜಡ್ತಿಲ ಪ್ರಹ್ಲಾದ ಶೆಟ್ಟಿ, ಮೋಹನ ಪೈ ಮಾಣಿ, ಸುರೇಶ್ ಪೂಜಾರಿ ಸೂರ್ಯ, ಜಗನ್ನಾಥ ಚೌಟ ಬದಿಗುಡ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನೇಕ ಮಂದಿ ಗಣ್ಯರು ದಿ.ಉದಯ ಚೌಟರವರಿಗೆ ನುಡಿನಮನದ ಮೂಲಕ ಸಂತಾಪ ವ್ಯಕ್ತಪಡಿಸಿದರು. ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಬದಿಗುಡ್ಡೆ ಉದಯ ಚೌಟ ಅವರಿಗೆ ಶ್ರದ್ಧಾಂಜಲಿ ಸಭೆ
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬದಿಗುಡ್ಡೆ ಉದಯ ಚೌಟ ಅವರಿಗೆ ಶ್ರದ್ಧಾಂಜಲಿ ಸಭೆ"