ಕಲ್ಲಡ್ಕ

ಬೋಳಂತೂರು ಶಾಲೆಯಲ್ಲಿ ಕೆಜಿ ತರಗತಿ ಉದ್ಘಾಟನೆ, ಪುಸ್ತಕ ವಿತರಣೆ

ಬಂಟ್ವಾಳ: ಬೋಳಂತೂರಿನ ದ.ಕ.ಜಿಪಂ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಎಲ್.ಕೆ.ಜಿ., ಯು.ಕೆ.ಜಿ. ತರಗತಿ ಉದ್ಘಾಟನೆ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಹಿನ್ನೆಲೆಯಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಿ ಹೊಸ ಕೊಠಡಿಗಳಿಗೆ ಚಿತ್ರ ಬರೆಯುವ ಮೂಲಕ ಸಹಕರಿಸಿದರು.  ಅಧ್ಯಕ್ಷತೆಯನ್ನು ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ ರೈ ನಾರ್ಶ ವಹಿಸಿದ್ದರು. ತರಗತಿಯನ್ನು ಅನಂತಪದ್ಮನಾಭ ಬಳ್ಳಕರಾಯ ಮತ್ತು ಇಸ್ಮಾಯಿಲ್ ಉದ್ಘಾಟಿಸಿದರು.

ಮುಖ್ಯ ಶಿಕ್ಷಕಿ ಗೀತಾ ಎಸ್. ಶಾಲಾಭಿವೃದ್ಧಿ ಕುರಿತ ಮಾಹಿತಿ ನೀಡಿದರು. ಹಿರಿಯರಾದ ಕೇಶವಯ್ಯ ಎಸ್, ಸುರೇಶಿನಿ, ಇಸ್ಮಾಯಿಲ್, ಸಂದೇಶ್.ಎಚ್.ನಾಯ್ಕ್, ಅವರನ್ನು ಸನ್ಮಾನಿಸಲಾಯಿತು.  ಉಚಿತ ನೋಟ್ ಪುಸ್ತಕಗಳನ್ನು ಉದ್ಯಮಿ ಬಶೀರ್ ಆಹ್ಮದ್ ಶಾಲೀಮರ್ ಅವರು ನೀಡಿ ಸಹಕರಿಸಿದರು. ಬೋಳಂತೂರು ಪರಿಸರದ ಬಿ.ಕೆ. ಬಾಯ್ಸ್ ಬಂಗಾರ ಕೋಡಿ, ವತಿಯಿಂದ ಶಾಲೆಗೆ ಕಂಪ್ಯೂಟರ್ ಕೊಡುಗೆ ನೀಡಲಾಯಿತು. ಶಾಲಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾದ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಆಬ್ಬಾಸ್ ಆಲಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬಶೀರ್ ನಾರಂಕೋಡಿ, ಬೋಳಂತೂರು ಗ್ರಾಮ.ಪಂಚಾಯತ್ ಅಭಿವೃದ್ದಿ ಅಧಿಕಾರಿ ಪುಷ್ಪ.ಎಂ, ಬೊಳಂತೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಚಂದ್ರಶೇಖರ್ ರೈ ನಾರ್ಶ, ಅಶ್ರಪ್ ಸುರಿಬೈಲ್, ಯಾಕೂಬ್ ದಂಡೆಮಾರ್, ಹಳೆ ವಿದ್ಯಾರ್ಥಿ ಹಾಗೂ ಸಾಮಾಜಿಕ ಮುಖಂಡ ಜಯರಾಮ್ ರೈ ಗುಡ್ಡೆಮಾರ್, ಹಳೆ ವಿದ್ಯಾರ್ಥಿ ಸಂಘದ ನೂತನ ಅದ್ಯಕ್ಷರಾದ ತಮೀಮ್ ಬೊಳಂತೂರು, ಇಸ್ಮಾಯಿಲ್ ಬೊಳಂತೂರು, ಉಸ್ಮಾನ್ ಬಂಗಾರಕೋಡಿ , ಮಹಮ್ಮದ್ ಮಾಡದ ಬಳಿ, ಅಮೀನ್ ಬೀಡಿ ಮಾಲಕರಾದ ಸುರೇಂದ್ರ ಅಮೀನ್, ಪವಿತ್ರ ಬೀಡಿ ಮಾಲಕ ರಪೀಕ್.ಕೆ.ಪಿ.ಬೈಲ್, ಯುವ ಉದ್ಯಮಿ ಸಲೀಂ ಕುಡುಂಬಕೋಡಿ, ಸಲೀಂ, ಶಫೀಕ್ ಬೊಟ್ಟಿಗದ್ದೆ, ಹಸೈನಾರ್ ಟಿ.ತಾಳಿತ್ತನೂಜಿ,  ಆವೀರ್ ಹಾಗೂ ರವಿ ಇನ್ನಿತರರು ಉಪಸ್ಥಿತರಿದ್ದರು. ಜಾತಿ-ಮತ ಬೇದವಿಲ್ಲದೆ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘಟಿತ ಒಗ್ಗೂಡಿಕೆ ಕಾರ್ಯಕ್ರಮದ ಯಶಸ್ವಿಗೆ ಕಾರಣವಾಯಿತು. ದೈಹಿಕ ಶಿಕ್ಷಕ ಹರೀಶ್ ವಿ ಸ್ವಾಗತಿಸಿದರು, ಹಮೀದ್ ಗೋಳ್ತಮಜಲ್ ನಿರೂಪಿಸಿದರು, ಶಿಕ್ಷಕಿ ಉಷಾ ಧನ್ಯವಾದ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

2 hours ago