ಪುಂಜಾಲಕಟ್ಟೆ

ಮಂಗಳೂರು ಸಹಾಯಕ ಕಮೀಷನರ್ ಅವರಿಂದ ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆ ನಿರ್ಮಾಣ ಸ್ಥಳ ವೀಕ್ಷಣೆ

ಪುಂಜಾಲಕಟ್ಟೆ: ಮಂಗಳೂರು ಸಹಾಯಕ ಕಮೀಷನರ್ ಮದನ್ ಮೋಹನ್ ಅವರು ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ರಶ್ಮಿ ಎಸ್.ಆರ್ , ಬಂಟ್ವಾಳ ತಹಸೀಲ್ದಾರ್ ಡಾ. ಸ್ಮಿತಾ ರಾಮು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ಧಲಿಂಗ, ಐ‌.ಟಿ.ಡಿ.ಪಿ‌‌.ಪ್ರಾಜೆಕ್ಟ್ ಡೈರೆಕ್ಟರ್ ಗಾಯತ್ರಿ ಮತ್ತು ಅವರ ತಂಡದೊಂದಿಗೆ  ಪುಂಜಾಲಕಟ್ಟೆಯಲ್ಲಿ 29 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆಯ ಸ್ಥಳ ವೀಕ್ಷಣೆಯನ್ನು ನಡೆಸಿದರು.

ಈ ಶೈಕ್ಷಣಿಕ ವರ್ಷದಿಂದ ಪುಂಜಾಲಕಟ್ಟೆಯ ಖಾಸಗಿ ಕಟ್ಟಡದಲ್ಲಿ ಆರಂಭಗೊಳ್ಳಲಿರುವ ವಸತಿ ಶಾಲೆ ಸ್ವಂತ ಜಾಗದಲ್ಲಿ ನಿರ್ಮಾಣಗೊಳ್ಳಲಿದೆ.

ಜಿ.ಪಂ.ಮಾಜಿ ಸದಸ್ಯ ಎಂ‌.ತುಂಗಪ್ಪ ಬಂಗೇರ, ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ, ಸದಸ್ಯ ಕಾಂತಪ್ಪ ಪೂಜಾರಿ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮ ಕರಣೀಕ ರಾಜು, ಗ್ರಾಮ ಸಹಾಯಕ ಸಂತೋಷ್, ಪಂಚಾಯತ್ ಕಾರ್ಯದರ್ಶಿ ಬಾಲಕೃಷ್ಣ, ಪ್ರಾಂಶುಪಾಲ ಸಂತೋಷ್, ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts