ಯಕ್ಷಗಾನ

ಶನಿವಾರ ಬಿ.ಸಿ.ರೋಡ್ ಕನ್ನಡ ಭವನದಲ್ಲಿ ತಿಂಗಳ ಬೆಳಕು ಕಾರ್ಯಕ್ರಮ – ಯಕ್ಷಗಾನ ತಾಳಮದ್ದಳೆ

ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ಕನ್ನಡ ಭವನದಲ್ಲಿ ಕಸಾಪ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ನಡೆಯುವ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ಜೂನ್ 11ರ ಶನಿವಾರ ಸಂಜೆ 3.30ರಿಂದ ಯಕ್ಷಗಾನ ತಾಳಮದ್ದಳೆ ಸುಧನ್ವ ಮೋಕ್ಷ ಪ್ರಸಂಗವನ್ನು ಮಹಿಳಾ ಕಲಾವಿದರು ಪ್ರಸ್ತುತಪಡಿಸಲಿದ್ದಾರೆ. ಪುತ್ತೂರು ಧೀಶಕ್ತಿ ಮಹಿಳಾ ಯಕ್ಷಬಳಗ ತಂಡದಿಂದ ಈ ಕಾರ್ಯಕ್ರಮ ಭೂಮಾಪನಾ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘದ ಜಿಲ್ಲಾಧ್ಯಕ್ಷ ಆನಂದ ಕುಮಾರ್ ಪ್ರಾಯೋಜಕತ್ವದಲ್ಲಿ ನಡೆಯಲಿದ್ದು, ಕಾರ್ಯಕ್ರಮವನ್ನು ದೀಪಪ್ರಜ್ವಲನ ಮಾಡುವ ಮೂಲಕ ಶಿಕ್ಷಣ ಸಂಯೋಜಕಿ ಸುಜಾತಾ ಕುಮಾರಿ ಉದ್ಘಾಟಿಸಲಿದ್ದಾರೆ ಎಂದು ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಮ್ಮೇಳದಲ್ಲಿ ಭಾಗವತರಾಗಿ ಕಾವ್ಯಶ್ರೀ ಆಜೇರು, ಮದ್ದಲೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಚೆಂಡೆಯಲ್ಲಿ ಶ್ರೀಪತಿ ನಾಯಕ್ ಆಜೇರು, ಮುಮ್ಮೇಳದಲ್ಲಿ ಸುಧನ್ವನಾಗಿ ಪದ್ಮಾ ಕೆ.ಆರ್.ಆಚಾರ್ಯ, ಅರ್ಜುನನಾಗಿ ಜಯಲಕ್ಷ್ಮೀ ವಿ.ಭಟ್, ಶ್ರೀಕೃಷ್ಣನಾಗಿ ಪ್ರೇಮಾ ಕಿಶೋರ್, ಪ್ರಭಾವತಿಯಾಗಿ ಶುಭಾ ಆಚಾರ್ಯ ನಿರ್ವಹಿಸುವರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.