ಬಂಟ್ವಾಳ

ಭೈರವ ಸಂಘದಿಂದ ಎಸ್.ಎಸ್.ಎಲ್.ಸಿ. ಸಾಧಕರಿಗೆ ಸನ್ಮಾನ

ಬಂಟ್ವಾಳ: ಎಸ್.ಎಸ್.ಎಲ್.ಸಿ. ಪರೀಕ್ಷೆಯ ಸಾಧಕರಿಗೆ ಪರಾರಿ ಎಂಬಲ್ಲಿರುವ ಶ್ರೀ ಭೈರವ ಸಂಘದಿಂದ ಸನ್ಮಾನಿಸಲಾಯಿತು. ಭೂಮಿಕಾ, ಮತ್ತು ಶ್ರೇಯಸ್ ಅವರಿಗೆ, ಶ್ರೀ ಭೈರವ ಸಂಘ ಪರಾರಿ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಪುರಸಭಾ ಸದಸ್ಯರಾದ ರಾಮಕೃಷ್ಣ ಆಳ್ವ ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿದರು. ಸಂಘದ ಅಧ್ಯಕ್ಷ ರಾಜೇಶ್, ಕಾರ್ಯದರ್ಶಿ ಗಣೇಶ್ ಹಾಗೂ ಇತರ ಪದಾದಿಕಾರಿಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳನ್ನು ಶಾಲು ಹೊದಿಸಿ ಫಲಪುಷ್ಪ ಸ್ಮರಣಿಕೆ ಹಾಗೂ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಗಣ್ಯರಾದ ಮನೋಹರ ಶೆಟ್ಟಿ, ವೇದನಾಥ ಶೆಟ್ಟಿ, ನಾಗೇಶ ಕಿರೋಡಿಯನ್,  ಉಮೇಶ ಮೂಲ್ಯ, ವಿದ್ಯಾರ್ಥಿಗಳ ಪೋಷಕರು ಹಾಗೂ ಇತರರು ಉಪಸ್ಥಿತರಿದ್ದರು.    ಉಮೇಶ್  ಸ್ವಾಗತಿಸಿದರು. ಅವಿಲ್  ವಂದಿಸಿದರು. ಗಣೇಶ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ