ಬಂಟ್ವಾಳ: ಮಾದಕ ವಸ್ತು ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಎಸ್.ಐ. ಎಂ.ಆರ್. ಹರೀಶ್ ನೇತೃತ್ವದ ತಂಡ ಸಜಿಪನಡು ಕುಂಟಾಲಗುಡ್ಡೆ ಎಂಬಲ್ಲಿಯ ಮೊಹಮ್ಮದ್ ಜಾಫರ್ (34) ಎಂಬಾತನನ್ನು ವಶಕ್ಕೆ ತೆಗೆದುಕೊಳ್ಳಲಾಯಿತು.
ಕರ್ತವ್ಯದಲ್ಲಿದ್ದ ಸಜೀಪ ಜಂಕ್ಷನ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಒಬ್ಬಾತ ಯಾವುದೋ ಮಾಧಕ ವಸ್ತುವನ್ನು ಸೇವಿಸಿ ನಶೆ ಹೊಂದಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬುವುದಾಗಿ ದೊರೆತ ಮಾಹಿತಿ ಮೇರೆಗೆ ಸಿಬಂದಿಗಳೊಂದಿಗೆ ತೆರಳಿ ವಿಚಾರಿಸಿದಾಗ ನಶೆಯ ಅಮಲಿನಲ್ಲಿ ಉತ್ತರಿಸುತ್ತಿದ್ದುದು ಕಂಡುಬಂದು, ನಿಷೇದಿತ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದಾಗಿ ತಿಳಿದುಬಂದಿದೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಕಂಡುಬಂದಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಗಾಂಜಾ ಸೇವನೆ: ಸಜೀಪ ಜಂಕ್ಷನ್ ನಲ್ಲಿ ವ್ಯಕ್ತಿ ಪೊಲೀಸ್ ವಶಕ್ಕೆ"
Be the first to comment on "ಗಾಂಜಾ ಸೇವನೆ: ಸಜೀಪ ಜಂಕ್ಷನ್ ನಲ್ಲಿ ವ್ಯಕ್ತಿ ಪೊಲೀಸ್ ವಶಕ್ಕೆ"