ಪುಂಜಾಲಕಟ್ಟೆ

ಕಾವಳಮುಡೂರು ಹಂಚಿಕಟ್ಟೆ ಎಂಬಲ್ಲಿ ಬೈಕ್ ನಲ್ಲಿ ಬಂದು ಸರಗಳ್ಳತನ

ಬಂಟ್ವಾಳ: ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಬೈಕಿನಲ್ಲಿ ಬಂದ ಆಗಂತುಕನೊಬ್ಬ ಸರ ಸೆಳೆದು ಪರಾರಿಯಾದ ಘಟನೆ ಕಾವಳಮುಡೂರು ಗ್ರಾಮದ ಹಂಚಿಕಟ್ಟೆ ಎಂಬಲ್ಲಿ ನಡೆದಿದೆ.

ಪೂವಮ್ಮ (69) ಎಂಬವರು ತಮ್ಮ ಸೊಸೆ ಮೋಹಿನಿ ಎಂಬವರೊಂದಿಗೆ ಕಾರ್ಯಕ್ರಮಕ್ಕೆ ಹೋಗುವ ನಿಮಿತ್ತ ತನ್ನ ತಮ್ಮನ ಮನೆಯ ಕಡೆಗೆ ಕಾವಳಪಡೂರು ಗ್ರಾಮದ  ಹಂಚಿಕಟ್ಟೆ ಕಡೆಯಿಂದ ಸಾಲು ಮರದ ತಿಮ್ಮಕ್ಕ ಉದ್ಯಾನವನ ರಸ್ತೆ  ಬದಿಯಲ್ಲಿ  ನಡೆದುಕೊಂಡು ಹೋಗುತ್ತಿದ್ದ ಸಂದರ್ಭ,  ಹಿಂದಿನಿಂದ ಮೋಟಾರ್ ಸೈಕಲ್ ಒಂದನ್ನು ಸವಾರಿ ಮಾಡಿಕೊಂಡು ಬರುತ್ತಿದ್ದ ವ್ಯಕ್ತಿ, ಮುಂದಕ್ಕೆ ಹೋಗಿ, ಬಳಿಕ ತಿರುಗಿಸಿ,  ಇವರ ಕಡೆಗೆ ಬಂದು, ನಿಧಾನಿಸಿ, ಏಕಾಏಕಿಯಾಗಿ ಕುತ್ತಿಗೆಗೆ ಕೈ ಹಾಕಿ, ಪೂವಮ್ಮ ಧರಿಸಿದ್ದ ಚಿನ್ನದ ಒಪ್ಪ ಮಾಡಿದ  ಅಂದಾಜು 1,200 ರೂ ಮೌಲ್ಯದ ಬೆಳ್ಳಿಯ ಸರಗಳನ್ನು ಸುಲಿಗೆ ಮಾಡಿ, ಬೈಕ್ ಸಮೇತ ಪರಾರಿಯಾಗಿದ್ದಾನೆ. ಘಟನೆ ಸಂದರ್ಭ ಪೂವಮ್ಮ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದ, ಕಪ್ಪು ಬಣ್ಣದ ಬೈಕಿನಲ್ಲಿ ಆರೋಪಿ ಆಗಮಿಸಿದ್ದ ಎಂದವರು ದೂರಿನಲ್ಲಿ ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ