ಬಂಟ್ವಾಳ: ರಸ್ತೆ ಬದಿ ತ್ಯಾಜ್ಯ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕುವ ಕುರಿತು ಹಲವು ಗ್ರಾಪಂಗಳು ತಲೆಕೆಡಿಸಿಕೊಂಡಿದ್ದರೆ, ಇಲ್ಲೊಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಕಸ ಹಾಕಿದವರ ಬಳಿಯಿಂದಲೇ ಕಸ ತೆಗೆಸಿ ಐದು ಸಾವಿರ ರೂ ದಂಡ ವಿಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಕುರಿಯಾಳ ಪಡು ಎಂಬಲ್ಲಿ ರಸ್ತೆ ಬದಿ ವ್ಯಕ್ತಿಯೊಬ್ಬರು ಕೆಲ ದಿನಗಳ ಹಿಂದೆ ರಾತ್ರಿ ವೇಳೆ ಕಸ ಎಸೆದಿದ್ದರು. ಇದನ್ನು ಪತ್ತೆಹಚ್ಚಿದ ಪಿಡಿಒ ರವಿ. ಬಿ, ಕಾರ್ಯದರ್ಶಿ ಲಕ್ಷ್ಮೀನಾರಾಯಣ, ಸಿಬ್ಬಂದಿ ಚೇತನ್ ಮತ್ತು ಇತರ ಸಿಬ್ಬಂದಿ ಎಸೆದ ವ್ಯಕ್ತಿಯನ್ನು ಕರೆಸಿ, ಅವರಿಂದಲೇ ಕಸ ತೆಗೆಸಿ, ಐದು ಸಾವಿರ ರೂ ದಂಡ ವಿಧಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಸೆದವರಿಂದಲೇ ತ್ಯಾಜ್ಯ ತೆಗೆಸಿದ ಗ್ರಾಪಂ ಅಧಿಕಾರಿಗಳು"