ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ನರಹರಿ ಪರ್ವತ ಸಮೀಪ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಕಬಕ ಗ್ರಾಮದ ಪರನೀರುಕಟ್ಟೆಯ ಮಹಮ್ಮದ್ ರಫೀಕ್ ಮುನ್ನಾ (44), ಪುತ್ತೂರು ಕೆಮ್ಮಿಂಜೆಯ ಮುಕ್ರಂಪಾಡಿ ಮನೆಯ ತಾರಾನಾಥ ಪೂಜಾರಿ (27) ಬಂಧಿತ ಆರೋಪಿಗಳು. ಬಂಧಿತ ರಿಂದ 7.500 ಮೌಲ್ಯದ 355 ಗ್ರಾಂ ಗಾಂಜಾ ವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಟ್ವಾಳ ಎಎಸ್ಪಿ ಶಿವಾಂಶು ರಜಪೂತ್ ಸೂಚನೆಯಂತೆ ವಿಶೇಷ ಸಿಬ್ಬಂದಿಯಾದ ಉದಯ ರೈ, ಕುಮಾರ್ ಕೆ, ನಾಗರಾಜ್ ಜೊತೆ ಅಪರಾಧ ವಿಭಾಗ ಎಸ್.ಐ. ಕಲೈಮಾರ್ ಈ ಕಾರ್ಯಾಚರಣೆ ನಡೆಸಿದ್ದಾರೆ. ನರಹರಿ ಪರ್ವತ ರಸ್ತೆಯಲ್ಲಿ ಆರೋಪಿಗಳು ಪೊಲೀಸರನ್ನು ನೋಡಿ ಓಡಿ ಹೋಗಲು ಯತ್ನಿಸಿದ್ದು, ಅವರನ್ನು ವಿಚಾರಿಸಿದಾಗ ಗಾಂಜಾ ಹೊಂದಿರುವುದು ಕಂಡುಬಂದಿದ್ದು, ಈ ಕುರಿತು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಗಾಂಜಾ ಹೊಂದಿದ್ದ ಇಬ್ಬರನ್ನು ಬಂಧಿಸಿದ ಬಂಟ್ವಾಳ ಪೊಲೀಸರು"
Be the first to comment on "ಗಾಂಜಾ ಹೊಂದಿದ್ದ ಇಬ್ಬರನ್ನು ಬಂಧಿಸಿದ ಬಂಟ್ವಾಳ ಪೊಲೀಸರು"