ವೀರಕಂಭದಲ್ಲಿ ಬಂಟ್ವಾಳ ತಹಸೀಲ್ದಾರ್ ಗ್ರಾಮವಾಸ್ತವ್ಯ: 57 ಅರ್ಜಿ ಸ್ವೀಕೃತ

ಬಂಟ್ವಾಳ: ವೀರಕಂಭ ಗ್ರಾಮದಲ್ಲಿ ಶನಿವಾರ ಬಂಟ್ವಾಳ ತಹಸೀಲ್ದಾರ್ ಡಾ. ಸ್ಮಿತಾ ರಾಮು ಅವರು ಗ್ರಾಮವಾಸ್ತವ್ಯ ನಡೆಸಿ, ಸಮಸ್ಯೆಗಳನ್ನು ಆಲಿಸಿದರು. ಒಟ್ಟು 57 ಅರ್ಜಿಗಳು ಸ್ವೀಕೃತಗೊಂಡಿವೆ ಎಂದು ಕಂದಾಯ ಇಲಾಖೆ ತಿಳಿಸಿದೆ. ಇವುಗಳಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿ 16, ಗ್ರಾಪಂ 23, ಭೂದಾಖಲೆ 10, ಮೆಸ್ಕಾಂ 3, ಸಮಾಜ ಕಲ್ಯಾಣ 1, ಅರಣ್ಯ ಇಲಾಖೆ 2, ಕೃಷಿ 1, ಕರಾರಸಾನಿಗಮಕ್ಕೆ ಸಂಬಂಧಿಸಿ 1 ಅರ್ಜಿ ಸೇರಿವೆ.

ಪಿಂಚಣಿ, ಪಡಿತರ ಚೀಟಿ ಸಹಿತ ವಿವಿಧ ಅಗತ್ಯ ಸವಲತ್ತುಗಳನ್ನು ಈ ಸಂದರ್ಭ ವಿತರಿಸಲಾಯಿತು. ವಿವಿಧ  ಪ್ರಸ್ತಾವನೆಗಳನ್ನು ದೂರುಗಳನ್ನು ಹಲವು ಬಾರಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗದ ಕುರಿತು ಕೊರಗ ಸಮುದಾಯದವರಿಗೆ ಜಾತಿ ಪ್ರಮಾಣಪತ್ರ ದೊರಕದ ಕುರಿತು 400 ಕೆವಿ ವಿದ್ಯುತ್ ಮಾರ್ಗದ ಕುರಿತು ಸ್ಥಳೀಯರು ಗಮನ ಸೆಳೆದರು. ಕೊರಗರ ಕಾಲೊನಿಗಳಿಗೆ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಧ್ಯಕ್ಷತೆಯನ್ನು ವೀರಕಂಬ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಪೂಜಾರಿ ವಹಿಸಿದ್ದರು. ಉಪಾಧ್ಯಕ್ಷೆ ಶೀಲಾ ನಿರ್ಮಲ ವೇಗಸ್, ವೀರಕಂಬ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಶಾಂತ್ ಉಪಸ್ಥಿತರಿದ್ದರು. ಉಪತಹಸೀಲ್ದಾರ್ ಗಳಾದ ವಿಜಯ ವಿಕ್ರಮ,  ನರೇಂದ್ರನಾಥ್ ಮಿತ್ತೂರು, ನವೀನ್ ಕುಮಾರ್, ಕಂದಾಯ ನಿರೀಕ್ಷಕರಾದ ಪ್ರಶಾಂತ್ ಶೆಟ್ಟಿ, ಗ್ರಾಮಕರಣಿಕ ಅನಿಲ್ ಕುಮಾರ್, ಮನೋಹರ್, ವೈಶಾಲಿ, ಕೃತಿಕಾ, ಚಂದ್ರಕಲಾ, ಪ್ರಶಾಂತ್ ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವೀರಕಂಭದಲ್ಲಿ ಬಂಟ್ವಾಳ ತಹಸೀಲ್ದಾರ್ ಗ್ರಾಮವಾಸ್ತವ್ಯ: 57 ಅರ್ಜಿ ಸ್ವೀಕೃತ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*