ಜಿಲ್ಲಾ ಸುದ್ದಿ

ಸಜಿಪಪಡು ತಲೆಮೊಗರುವಿನಲ್ಲಿ ನಡೆದ ಘಟನೆ: ನೇತ್ರಾವತಿ ನದಿಗಿಳಿದ ಯುವಕರ ಪೈಕಿ ಓರ್ವ ನೀರುಪಾಲು

ಉಳ್ಳಾಲ ತಾಲೂಕಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೊಳಪಟ್ಟ ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ಹರಿಯುವ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ನಡೆದಿದೆ.

ನೀರುಪಾಲಾದ ಅಶ್ವಿತ್ (19) ಹುಡುಕಾಟವನ್ನು ಅಗ್ನಿಶಾಮಕದಳ ಮತ್ತು ಈಜುಗಾರರ ಸಹಾಯದಿಂದ ನಡೆಸಲಾಗುತ್ತಿದ್ದು, ಮತ್ತೋರ್ವ ಹರ್ಷ ಎಂಬಾತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದ ಐವರು ಸ್ನೇಹಿತರು ನೀರಾಟವಾಡಲು ತೆರಳಿದ್ದಾರೆ. ವಿಶಾಲ್ , ವಿಕಾಸ್ ,ಲಿಖಿತ್ ,ಹರ್ಷ ಜೊತೆ ಅಶ್ವಿತ್ ನೀರಾಟವಾಡಲು ತೆರಳಿದ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದಾರೆ. ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿದ್ದರೆ, ಅಶ್ವಿತ್ ಗಾಗಿ ಹುಡುಕಾಟ ಸಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಎಸ್.ಐ. ಹರೀಶ್ ನೇತೃತ್ವದಲ್ಲಿ ಸಿಬ್ಬಂದಿ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.