ಬಂಟ್ವಾಳ

ಮೊದಲನೇ ಹಂತದ ಲೋಪ ಸರಿಪಡಿಸಿ, ಬಳಿಕ ಎರಡನೇ ಹಂತದ ಒಳಚರಂಡಿ ಕಾಮಗಾರಿ ನಿರ್ವಹಿಸಿ: ವಿಶೇಷ ಸಭೆಯಲ್ಲಿ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಸೂಚನೆ

ಕರ್ನಾಟಕ ನಗರ ನೀರು ಸರಬರಾಜು ಯೋಜನೆಯ ಎರಡನೇ ಹಂತದ 64 ಕೋಟಿ ರೂ ವೆಚ್ಚದ ಒಳಚರಂಡಿ ಕಾಮಗಾರಿ ಆರಂಭಗೊಳಿಸುವ ಮೊದಲು ಮೊದಲನೇ ಹಂತದ ಕೆಲಸದ ಕುರಿತು ಪರಿಶೀಲನೆ ನಡೆಸಿ, ಬಳಿಕ ಮುಂದುವರಿಯಬೇಕು ಎಂದು ಬಂಟ್ವಾಳ ಪುರಸಭೆಯ ಸಭಾಂಗಣದಲ್ಲಿ ಬುಧವಾರ ಕರೆದ ವಿಶೇಷ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷ ಮಹಮ್ಮದ್ ಶರೀಫ್ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಳೆದ ಬಾರಿ ಪುರಸಭಾ ವ್ಯಾಪ್ತಿಯಲ್ಲಿ ಮಾಡಿದ ಒಳಚರಂಡಿ ಕಾಮಗಾರಿ ವ್ಯವಸ್ಥಿತವಾಗಿ ಆಗಲಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಸ್ಪಷ್ಟವಾದ ಆದೇಶವನ್ನು ನೀಡಲಾಗಿದ್ದು, ಎರಡನೇ ಹಂತದ ಆರಂಭಗೊಳ್ಳುವ ಹಂತದಲ್ಲಿ ಮೊದಲು ಮಾಡಿದ ವ್ಯವಸ್ಥೆಯನ್ನು ಪರಿಶೀಲಿಸಬೇಕು, ಬಳಿಕವೇ ಮುಂದುವರಿಯಬೇಕು ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು ಎಂದರು. ಇದೇ ವೇಳೆ ಕಂಚಿನಡ್ಕಪದವಿನಲ್ಲಿ ತ್ಯಾಜ್ಯ ವಿಲೇವಾರಿಯನ್ನು ಸೂಕ್ತ ರೀತಿಯಲ್ಲಿ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ವಹಿಸಲು ತೀರ್ಮಾನಿಸಲಾಯಿತು.

ವಿವಿಧ ವಿಚಾರಗಳ ಕುರಿತು ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಮಾಜಿ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಸದಸ್ಯರಾದ ವಾಸು ಪೂಜಾರಿ, ಸಿದ್ಧೀಕ್ ಗುಡ್ಡೆಯಂಗಡಿ, ಇದ್ರೀಸ್ ಪಿ.ಜೆ, ಝೀನತ್ ಫಿರೋಜ್, ಹಸೈನಾರ್, ಗಂಗಾಧರ ಪೂಜಾರಿ, ಲೋಲಾಕ್ಷ ಶೆಟ್ಟಿ, ಮೊನೀಶ್ ಆಲಿ, ಗಾಯತ್ರಿ ಪ್ರಕಾಶ್ ಮಾತನಾಡಿದರು. ಇಂಜಿನಿಯರ್ ಶೋಭಾಲಕ್ಷ್ಮೀ, ಡೊಮಿನಿಕ್ ಡಿಮೆಲ್ಲೊ ಪೂರಕ ಮಾಹಿತಿ ನೀಡಿದರು. ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ ಉಪಸ್ಥಿತರಿದ್ದು, ಸ್ವಾಗತಿಸಿ, ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ