ಬಂಟ್ವಾಳ

ಮರಳು, ಜೂಜು ಅಕ್ರಮ ದಂಧೆಗೆ ಕಡಿವಾಣ ಹಾಕಲು ಹೊರಟಿದ್ದಕ್ಕೆ ಎಎಸ್ಪಿ ಟ್ರಾನ್ಸ್ಫರ್ – ರಮಾನಾಥ ರೈ ಆರೋಪ

ಬಂಟ್ವಾಳದ ಎಎಸ್ಪಿ ಶಿವಾಂಶು ರಜಪೂತ್ ವರ್ಗಾವಣೆಗೆ ಮರಳು, ಜೂಜಿನಂಥ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಲು ಹೊರಟಿದ್ದೇ ಕಾರಣ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆಪಾದಿಸಿದ್ದಾರೆ. ಇದಕ್ಕೆಲ್ಲ ರಾಜಕೀಯ ಪ್ರೇರಣೆಯೇ ಕಾರಣ ಎಂದು ಆರೋಪಿಸಿರುವ ಅವರು, ಬಂಟ್ವಾಳ ಮತ್ತು ಬೆಳ್ತಂಗಡಿ ಕ್ಷೇತ್ರಗಳಲ್ಲಿ ವ್ಯಾಪಕವಾಗಿ ಅಕ್ರಮ ದಂಧೆ ನಡೆಯುತ್ತಿದೆ ಎಂದು ಪುನರುಚ್ಛರಿಸಿದ್ದಾರೆ. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆಡಳಿತ ಪಕ್ಷದ ರಾಜಕೀಯ ಪ್ರೇರಣೆ ಇದಕ್ಕೆಲ್ಲ ಕಾರಣ ಎಂದು ಆಡಳಿತ ಪಕ್ಷದ ವಿರುದ್ಧ ಅವರು ಗಂಭೀರ ಆಪಾದನೆ ಮಾಡಿದ್ದಾರೆ.

ಒಳ್ಳೆಯ ಕೆಲಸ ಮಾಡುತ್ತಿದ್ದ ಅಧಿಕಾರಿಯನ್ನು ಹಠಾತ್ತಾಗಿ ವರ್ಗಾವಣೆ ಮಾಡಿದ್ದಾರೆ, ನಿರಂತರವಾಗಿ ಅಕ್ರಮ ಮರಳುಗಾರಿಕೆ ಬಂಟ್ವಾಳ ಕ್ಷೇತ್ರದಲ್ಲಿ ನಡೆಯುತ್ತಿದ್ದು, ಅನಂತಾಡಿಯಲ್ಲಿ ಗಣಿಗಾರಿಕೆಯಿಂದ ಗುಹಾತೀರ್ಥಕ್ಕೆ ತೊಂದರೆ ಆಗುತ್ತಿದೆ ಎಂಬ ಆರೋಪವನ್ನು ಮಾಡಿ ಪ್ರತಿಭಟನೆಯನ್ನು ಮಾಡಿದ್ದೆವು ಎಂದು ರೈ ನೆನಪಿಸಿದರು. ಜೂಜು ಅಡ್ಡೆಯ ಬಳಿಯೇ ಹಲ್ಲೆ ಪ್ರಕರಣ, ವರದಿಯಾಗಿವೆ. ಹೆಣ್ಣುಮಕ್ಕಳ ಕರಿಮಣಿ ಅಡವಿಟ್ಟು ಜುಗಾರಿ ದಂಧೆಯಲ್ಲಿ ತೊಡಗಿಸಿಕೊಂಡವರಿದ್ದಾರೆ ಎಂದು ರೈ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷ ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಆಲಿ ಬೋಳಂತೂರು, ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಮುರಳೀಧರ ರೈ ಮಠಂತಬೆಟ್ಟು, ಪ್ರಸಾದ್ ಕೌಶಲ್ ಶೆಟ್ಟಿ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉಮಾನಾಥ ರೈ, ಮಹಮ್ಮದ್ ಬಡಗನ್ನೂರು, ಪದ್ಮನಾಭ ರೈ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

17 hours ago